Webdunia - Bharat's app for daily news and videos

Install App

ನಟಿಗೆ ತಾಳಿ ಕಟ್ಟಿ ದೋಖಾ: ರೌಡಿ ಕುಣಿಗಲ್ ಗಿರಿ ಸಹೋದರ ವಿರುದ್ಧ ದೂರು

Webdunia
ಸೋಮವಾರ, 16 ಆಗಸ್ಟ್ 2021 (10:18 IST)
ಬೆಂಗಳೂರು: ಕನ್ನಡ ಧಾರವಾಹಿ, ಸಿನಿಮಾಗಳಲ್ಲಿ ಸಹಕಲಾವಿದೆಯಾಗಿ ನಟಿಸುತ್ತಿದ್ದ ನಟಿಯೊಬ್ಬರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಕುಣಿಗಲ್ ಗಿರಿ ಸಹೋದರ ಹರೀಶ್ ಎಂಬಾತನನ್ನು ವಿರುದ್ಧ ದೂರು ದಾಖಲಾಗಿದೆ.


ಹೆಗ್ಗನಹಳ್ಳಿ ನಿವಾಸಿಯಾದ ಯುವತಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಇದನ್ನು ಅರಿತ ಆರೋಪಿ ಆಕೆ ಜೊತೆ ಸ್ನೇಹ ಸಂಪಾದಿಸಿ ಪ್ರೀತಿಯ ನಾಟಕವಾಡಿದ್ದಾನೆ. ಬಳಿಕ ಮನೆಯಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಚಿನ್ನಾಭರಣ, 2.50 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾನೆ.

ಕೆಲವು ದಿನಗಳ ಬಳಿಕ ಯುವತಿ ನ್ಯಾಯ ಕೇಳಲು ಆತನ ಮನೆಗೆ ಹೋದಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಯುವತಿ ದೂರು ನೀಡಿದಾಗ ವಂಚಕನ ಮನೆಯವರು ಚೆಕ್ ನೀಡಿದ್ದಾರೆ. ಆದರೆ ಈ ಚೆಕ್ ನ್ನು ಬ್ಯಾಂಕ್ ಗೆ ಹಾಕಿದಾಗ ಹಣವಿಲ್ಲ ಎಂದು ಗೊತ್ತಾಗಿದೆ. ಬಳಿಕ ಹರೀಶ್ ತನ್ನ ಸಹೋದರ ರೌಡಿ ಕುಣಿಗಲ್ ಗಿರಿ ಮೂಲಕ ಕರೆ ಮಾಡಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಯುವತಿ ಈಗ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments