Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ-ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥದಲ್ಲಿ ಕುಡ್ಲದ ತಾರೆಯರದ್ದೇ ದಂಡು!

Webdunia
ಮಂಗಳವಾರ, 4 ಜುಲೈ 2017 (08:38 IST)
ವಿರಾಜಪೇಟೆ: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆಯೊತ್ತಿದರು. ವಿರಾಜ ಪೇಟೆಯ ಸೆರೆನಿಟಿ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸ್ಯಾಂಡಲ್ ವುಡ್ ನ ಈ ಜೋಡಿ ಪರಸ್ಪರ ಉಂಗುರ ಬದಲಾಯಿಸಿಕೊಂಡರು.

 
ರಕ್ಷಿತ್ ಹೇಳಿ ಕೇಳಿ ಮಂಗಳೂರಿನವರು. ಹಾಗಾಗಿ ಕುಡ್ಲ (ಮಂಗಳೂರು)ದ ತಾರೆಯರ ದಂಡೇ ಕಾರ್ಯಕ್ರಮದಲ್ಲಿ ನೆರೆದಿತ್ತು. ಹಿರಿತೆರೆ, ಕಿರುತೆರೆಯಲ್ಲಿ ಸದ್ದು ಮಾಡುತ್ತಿರುವ ಮಂಗಳೂರು ಮೂಲದ ಕಲಾವಿದರೆಲ್ಲಾ ಒಟ್ಟು ಸೇರಿದ್ದು ವಿಶೇಷವಾಗಿತ್ತು.

ಇವರಲ್ಲಿ ರಿಷಬ್ ಶೆಟ್ಟಿ,  ಯಜ್ಞಾ ಶೆಟ್ಟಿ, ಸೇರಿದಂತೆ ಕಿರಿಕ್ ಪಾರ್ಟಿ ಚಿತ್ರತಂಡವೇ ಅಲ್ಲಿ ನೆರೆದಿತ್ತು. ಅಂತೂ ಬಿಗಿ ಬಂದೋಬಸ್ತ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯರ ಸಮ್ಮುಖದಲ್ಲಿ ರಕ್ಷಿತ್-ರಶ್ಮಿಕಾ ನಿಶ್ಚಿತಾರ್ಥ ಮಾಡಿಕೊಂಡರು. ರಶ್ಮಿಕಾ ಪಿಂಕ್ ಬಣ್ಣದ ಉಡುಗೆ ತೊಟ್ಟಿದ್ದರೆ, ರಕ್ಷಿತ್ ಅದಕ್ಕೊಪ್ಪುವ ಸೂಟ್ ನಲ್ಲಿ ಮಿಂಚುತ್ತಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments