ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

Krishnaveni K
ಶುಕ್ರವಾರ, 17 ಅಕ್ಟೋಬರ್ 2025 (09:39 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಇಷ್ಟು ಸೀಸನ್ ಗಳ ಕಾಲ ಕಾಮಿಡಿ ಕಿಲಾಡಿಗಳು ಶೋ ಅವಿಭಾಜ್ಯ ಅಂಗವಾಗಿದ್ದ ಮಾಸ್ಟರ್ ಆನಂದ್ ಇನ್ನು ಆ ಶೋನಲ್ಲಿ ಇರಲ್ಲ ಎನ್ನಲಾಗುತ್ತಿದೆ.

ಜೀ ಕನ್ನಡ ವಾಹಿನಿಯ ಜನಪ್ರಿಯ ಶೋಗಳಲ್ಲಿ ಕಾಮಿಡಿ ಕಿಲಾಡಿಗಳು ಕೂಡಾ ಒಂದು. ಈಗಾಗಲೇ ನಾಲ್ಕು ಸೀಸನ್ ಮುಗಿಸಿರುವ ಕಾಮಿಡಿ ಕಿಲಾಡಿಗಳು ಶೋ ಅನೇಕ ಕಲಾವಿದರನ್ನು ಸ್ಯಾಂಡಲ್ ವುಡ್ ಗೆ ನೀಡಿದೆ. ಇವರಲ್ಲಿ ಶಿವರಾಜ್ ಕೆಆರ್ ಪೇಟೆ, ಅಪ್ಪಣ್ಣ, ಮನು, ರಾಕೇಶ್ ಪೂಜಾರಿ ಮುಂತಾದವರು ಸ್ಯಾಂಡಲ್ ವುಡ್ ನಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.

ಇದೀಗ ಕಾಮಿಡಿ ಕಿಲಾಡಿಗಳು ಸೀಸನ್ 5 ಬರುತ್ತಿದೆ. ಕಳೆದ ನಾಲ್ಕು ಸೀಸನ್ ಗಳಲ್ಲಿ ಮಾಸ್ಟರ್ ಆನಂದ್ ಶೋ ನಿರೂಪಕರಾಗಿದ್ದರು. ಆದರೆ ಈಗ ಐದನೇ ಸೀಸನ್ ನ ಆರಂಭವಾಗುತ್ತಿದೆ ಎಂಬ ಪ್ರೋಮೋ ಜೀ ವಾಹಿನಿ ಹೊರಬಿಟ್ಟಿದ್ದು, ಅದರಲ್ಲಿ ಆನಂದ್ ಸ್ಥಾನದಲ್ಲಿ ನಿರಂಜನ್ ದೇಶಪಾಂಡೆ ಕಂಡುಬಂದಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಮಾಸ್ಟರ್ ಆನಂದ್ ನಿರೂಪಣೆ ಮಾಡುವುದು ಅಪರೂಪವಾಗಿದೆ. ಇದೀಗ ಕಾಮಿಡಿ ಕಿಲಾಡಿಗಳು ಶೋನಿಂದಲೂ ಅವರು ಹೊರಬಂದಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ. ಹೀಗಾಗಿ ಪ್ರೋಮೋ ನೋಡಿದ ಪ್ರೇಕ್ಷಕರು ಯಾಕೆ ಆನಂದ್ ಸರ್ ಇಲ್ಲ? ಅವರು ಈ ಶೋಗೆ ಬೆಸ್ಟ್ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಈಗ ಆನಂದ್ ಅವರೇ ಉತ್ತರ ಕೊಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments