Select Your Language

Notifications

webdunia
webdunia
webdunia
webdunia

ಮಾಸ್ತಿ ಗುಡಿ ದುರಂತ: ಶೂಟಿಂಗ್ ನಿಲ್ಲಿಸಿ ಘಟನಾ ಸ್ಥಳಕ್ಕೆ ತೆರಳಿದ ಜಗ್ಗೇಶ್

ಮಾಸ್ತಿ ಗುಡಿ ದುರಂತ: ಶೂಟಿಂಗ್ ನಿಲ್ಲಿಸಿ ಘಟನಾ ಸ್ಥಳಕ್ಕೆ ತೆರಳಿದ ಜಗ್ಗೇಶ್
ಬೆಂಗಳೂರು , ಮಂಗಳವಾರ, 8 ನವೆಂಬರ್ 2016 (09:51 IST)
ಬೆಂಗಳೂರು: ಮಾಸ್ತಿ ಗುಡಿ ದುರಂತ ಇಡೀ ಚಿತ್ರರಂಗಕ್ಕೆ ಶಾಕ್ ಕೊಟ್ಟಿದೆ. ನವರಸನಾಯಕ ಜಗ್ಗೇಶ್ ತಮ್ಮ ಸಮಾಜಿಕ ಜಾಲತಾಣದ ಪುಟಗಳಲ್ಲಿ ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದರು. ಜತೆಗೆ ತಮ್ಮ ಕಾಮಿಡಿ ಕಿಲಾಡಿಗಳು ಚಿತ್ರೀಕರಣದಲ್ಲಿ ಪಾಲ್ಗೊಳ್ಳದೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಉದಯ್ ಮತ್ತು ಅನಿಲ್ ತಮ್ಮ ಪುತ್ರ ಯತಿರಾಜ್ ಸ್ನೇಹಿತರು ಎಂದು ಜಗ್ಗೇಶ್ ನಿನ್ನೆಯೇ ಹೇಳಿಕೊಂಡಿದ್ದರು. ಹೀಗಾಗಿ ತಮ್ಮ ಪುತ್ರ ಮತ್ತು ಪತ್ನಿಯ ಜತೆಗೆ ತಿಪ್ಪೆಗೊಂಡನಹಳ್ಳಿ ಕೆರೆ ಪ್ರದೇಶಕ್ಕೆ ತೆರಳಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಕಿಲಾಡಿಗಳು ಚಿತ್ರೀಕರಣ ಮಾಡುತ್ತಿಲ್ಲ ಎಂದು ಜಗ್ಗೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ ಚಿತ್ರರಂಗದ ದಂಡೇ ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ತಿ ಗುಡಿ ದುರಂತ: ಚಿತ್ರ ತಂಡದ ವಿರುದ್ಧ ಕೇಸು ದಾಖಲು