Webdunia - Bharat's app for daily news and videos

Install App

ಮಾಸ್ತಿಗುಡಿ ನಿರ್ಮಾಪಕರಿಗೆ ಕಡೆಗೂ ಸಿಕ್ತು ಜಾಮೀನು

Webdunia
ಶುಕ್ರವಾರ, 23 ಡಿಸೆಂಬರ್ 2016 (13:46 IST)
ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಸಂಭವಿಸಿದ ದುರಂತದಲ್ಲಿ ಇಬ್ಬರು ಖಳನಟರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಅವರಿಗೆ ಗುರುವಾರ ರಾತ್ರಿ ಜಾಮೀನು ಸಿಕ್ಕಿದೆ. ದುನಿಯಾ ವಿಜಯ್ ಮುಖ್ಯಭೂಮಿಕೆಯಲ್ಲಿರುವ ಚಿತ್ರ ಇದು.
 
ದುನಿಯಾ ವಿಜಿಗೆ ಆತ್ಮೀಯ ಗೆಳೆಯನೂ ಆಗಿರುವ ಸುಂದರ್ ಅವರೊಂದಿಗೆ ಈ ಹಿಂದೆ ಜಾಕ್ಸನ್ ಚಿತ್ರವನ್ನು ನಿರ್ಮಿಸಿದ್ದರು. ಮಾಸ್ತಿಗುಡಿ ಚಿತ್ರೀಕರಣ ಅವಘಡದಲ್ಲಿ ನಿರ್ಮಾಪಕರ ಪಾತ್ರ ಇಲ್ಲದಿದ್ದರೂ ಸುಂದರ್ ಅವರನ್ನು ಬಂಧಿಸಲಾಗಿತ್ತು. ಒಂದು ತಿಂಗಳ ಕಾಲ ಜೈಲಿನಲ್ಲಿರಬೇಕಾಯಿತು. 
 
ಚಿತ್ರದ ಸ್ಟಂಟ್ ಮಾಸ್ಟರ್ ರವಿವರ್ಮಾ ಮತ್ತು ನಿರ್ದೇಶಕ ನಾಗಶೇಖರ್ ಅವರಿಗೆ ಜಾಮೀನು ಸಿಕ್ಕಿ ಬಿಡುಗಡೆಯಾಗಿದ್ದಾರೆ. ಆದರೆ ಸುಂದರ್ ಗೌಡ ಮಾತ್ರ ಒಂದು ತಿಂಗಳ ಕಾಲ ಜೈಲಿನಲ್ಲೇ ಕೊಳೆಯುವಂತಾಗಿತ್ತು. ಈ ಘಟನೆಯಲ್ಲಿ ನಿರ್ಮಾಪಕರ ಪಾತ್ರ ಇಲ್ಲದಿರುವುದು ಎಲ್ಲರಿಗೂ ಗೊತ್ತಿದ್ದರೂ ನಸೀಬು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments