ಗಂಡ ತೀರಿಕೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕೈ ಮುಗಿದು ಬೇಡಿಕೊಂಡ ನಟಿ ಮೀನಾ

Webdunia
ಶನಿವಾರ, 2 ಜುಲೈ 2022 (10:00 IST)
ಚೆನ್ನೈ: ಮೊನ್ನೆಯಷ್ಟೇ ಪತಿ ವಿದ್ಯಾಸಾಗರ್ ಅನಾರೋಗ್ಯದಿಂದ ನಿಧನರಾದ ದುಃಖದಲ್ಲಿರುವ ನಟಿ ಮೀನಾ ಈಗ ಸೋಷಿಯಲ್ ಮೀಡಿಯಾದಲ್ಲಿ ಮಾಧ‍್ಯಮಗಳಿಗೆ ಮನವಿ ಮಾಡಿದ್ದಾರೆ.

ವಿದ್ಯಾಸಾಗರ್ ಅಕಾಲಿಕ ಸಾವಿಗೆ ಕಾರಣಗಳ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದವು. ಇದರ ಬೆನ್ನಲ್ಲೇ ನಟಿ ಖುಷ್ಬೂ ತಪ್ಪು ಮಾಹಿತಿ ಹಾಕಬೇಡಿ ಎಂದು ಮನವಿ ಮಾಡಿದ್ದರು. ವಿದ್ಯಾಸಾಗರ್ ಸಾವಿಗೆ ಕೊರೋನಾ ಕಾರಣವಲ್ಲ, ಶ್ವಾಸಕೋಶದ ಸೋಂಕು ಆಗಿತ್ತು ಎಂದಿದ್ದರು.

ಇದೀಗ ಮೀನಾ ಕೂಡಾ ಇದೇ ರೀತಿ ಮನವಿ ಮಾಡಿದ್ದಾರೆ. ನಾನು ನನ್ನ ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದೇನೆ. ಹೀಗಾಗಿ ಮಾಧ್ಯಮಗಳು ನನ್ನ ದುಃಖ, ಖಾಸಗಿತನಕ್ಕೆ ಬೆಲೆ ಕೊಡಬೇಕು ಎಂದು ಮನವಿ ಮಾಡುತ್ತೇನೆ. ಅವರ ಸಾವಿನ ಬಗ್ಗೆ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ. ಈ ದುಃಖದ ಸಂದರ್ಭದಲ್ಲಿ ನಮ್ಮ ಜೊತೆಗೆ ನಿಂತು ಧೈರ್ಯ ತುಂಬಿದ ಎಲ್ಲರಿಗೂ, ನನ್ನ ಗಂಡನನ್ನು ಉಳಿಸಿಕೊಳ‍್ಳಲು ಪ್ರಯತ್ನ ನಡೆಸಿದ ವೈದ್ಯರ ತಂಡಕ್ಕೆ, ಸಹಕರಿಸಿದ ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಗಳು ಹಾಗೂ ಎಲ್ಲಾ ಸ್ನೇಹಿತರು, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಮೀನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments