Webdunia - Bharat's app for daily news and videos

Install App

ಕ್ಯಾನ್ಸರ್ ಎಂದು ವದಂತಿ: ಸ್ಪಷ್ಟನೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

Webdunia
ಭಾನುವಾರ, 4 ಜೂನ್ 2023 (09:00 IST)
Photo Courtesy: Twitter
ಹೈದರಾಬಾದ್: ಸೆಲೆಬ್ರಿಟಿಗಳ ಸಾವು, ಅನಾರೋಗ್ಯದ ಬಗ್ಗೆ ವದಂತಿಗಳು ಹರಡುವವರಿಗೇನೂ ಕಡಿಮೆಯಿಲ್ಲ. ಇದೀಗ ಮೆಗಾಸ್ಟಾರ್ ಚಿರಂಜೀವಿ ಬಗ್ಗೆಯೂ ಅಂತಹದ್ದೇ ಸುದ್ದಿಯೊಂದು ಹರಡಿತ್ತು.

ಚಿರಂಜೀವಿಗೆ ಕ್ಯಾನ್ಸರ್ ಎಂದು ಸುದ್ದಿ ಹಬ್ಬಿತ್ತು. ಇಂತಹದ್ದೊಂದು ಸುದ್ದಿ ಹರಡುತ್ತಿದ್ದಂತೇ ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಹೀಗಾಗಿ ಕೊನೆಗೆ ಸ್ವತಃ ಚಿರಂಜೀವಿ ತಮ್ಮ ಆರೋಗ್ಯದ ಬಗ್ಗೆ ಮತ್ತು ವದಂತಿ ಹರಡಲು ಕಾರಣವೇನೆಂದು ಸ್ಪಷ್ಟನೆ ಕೊಟ್ಟಿದ್ದಾರೆ.

‘ಕ್ಯಾನ್ಸರ್ ಸೆಂಟರ್ ಉದ್ಘಾಟನೆಯೊಂದರ ವೇಳೆ ನಾನು ನನಗೆ ಈ ಹಿಂದೆ ಕ್ಯಾನ್ಸರ್ ಅಲ್ಲದ ಗಡ್ಡೆಯೊಂದು ಕಾಣಿಸಿಕೊಂಡಿದ್ದರ ಬಗ್ಗೆ ಮಾತನಾಡಿದ್ದೆ. ಅದನ್ನು ತಕ್ಷಣವೇ ತೆಗೆಸಿದ್ದರಿಂದ ನನಗೆ ಕ್ಯಾನ್ಸರ್ ತಗುಲಿರಲಿಲ್ಲ. ಹಾಗಾಗಿ ಮುಂಜಾಗ್ರತೆ ವಹಿಸಿ, ಪರೀಕ್ಷಿಸಿಕೊಳ್ಳಿ ಎಂದಿದ್ದೆ. ಇದರಿಂದಲೇ ನನಗೆ ಕ್ಯಾನ್ಸರ್ ತಗುಲಿದೆ ಎಂದು ಕೆಲವರು ತಪ್ಪಾಗಿ ತಿಳಿದು ವರದಿ ಮಾಡಿದ್ದರು. ಅಂತಹವರಿಗೆ ನನ್ನ ಮನವಿ, ವಿಷಯ ಸ್ಪಷ್ಟವಾಗದೇ ಅಸಂಬದ್ಧವಾಗಿ ಬರೆಯಬೇಡಿ. ಇದರಿಂದ ಅನೇಕರಿಗೆ ಭಯವಾಗುತ್ತದೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments