Webdunia - Bharat's app for daily news and videos

Install App

ಕ್ಯಾನ್ಸರ್ ಎಂದು ವದಂತಿ: ಸ್ಪಷ್ಟನೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

Webdunia
ಭಾನುವಾರ, 4 ಜೂನ್ 2023 (09:00 IST)
Photo Courtesy: Twitter
ಹೈದರಾಬಾದ್: ಸೆಲೆಬ್ರಿಟಿಗಳ ಸಾವು, ಅನಾರೋಗ್ಯದ ಬಗ್ಗೆ ವದಂತಿಗಳು ಹರಡುವವರಿಗೇನೂ ಕಡಿಮೆಯಿಲ್ಲ. ಇದೀಗ ಮೆಗಾಸ್ಟಾರ್ ಚಿರಂಜೀವಿ ಬಗ್ಗೆಯೂ ಅಂತಹದ್ದೇ ಸುದ್ದಿಯೊಂದು ಹರಡಿತ್ತು.

ಚಿರಂಜೀವಿಗೆ ಕ್ಯಾನ್ಸರ್ ಎಂದು ಸುದ್ದಿ ಹಬ್ಬಿತ್ತು. ಇಂತಹದ್ದೊಂದು ಸುದ್ದಿ ಹರಡುತ್ತಿದ್ದಂತೇ ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಹೀಗಾಗಿ ಕೊನೆಗೆ ಸ್ವತಃ ಚಿರಂಜೀವಿ ತಮ್ಮ ಆರೋಗ್ಯದ ಬಗ್ಗೆ ಮತ್ತು ವದಂತಿ ಹರಡಲು ಕಾರಣವೇನೆಂದು ಸ್ಪಷ್ಟನೆ ಕೊಟ್ಟಿದ್ದಾರೆ.

‘ಕ್ಯಾನ್ಸರ್ ಸೆಂಟರ್ ಉದ್ಘಾಟನೆಯೊಂದರ ವೇಳೆ ನಾನು ನನಗೆ ಈ ಹಿಂದೆ ಕ್ಯಾನ್ಸರ್ ಅಲ್ಲದ ಗಡ್ಡೆಯೊಂದು ಕಾಣಿಸಿಕೊಂಡಿದ್ದರ ಬಗ್ಗೆ ಮಾತನಾಡಿದ್ದೆ. ಅದನ್ನು ತಕ್ಷಣವೇ ತೆಗೆಸಿದ್ದರಿಂದ ನನಗೆ ಕ್ಯಾನ್ಸರ್ ತಗುಲಿರಲಿಲ್ಲ. ಹಾಗಾಗಿ ಮುಂಜಾಗ್ರತೆ ವಹಿಸಿ, ಪರೀಕ್ಷಿಸಿಕೊಳ್ಳಿ ಎಂದಿದ್ದೆ. ಇದರಿಂದಲೇ ನನಗೆ ಕ್ಯಾನ್ಸರ್ ತಗುಲಿದೆ ಎಂದು ಕೆಲವರು ತಪ್ಪಾಗಿ ತಿಳಿದು ವರದಿ ಮಾಡಿದ್ದರು. ಅಂತಹವರಿಗೆ ನನ್ನ ಮನವಿ, ವಿಷಯ ಸ್ಪಷ್ಟವಾಗದೇ ಅಸಂಬದ್ಧವಾಗಿ ಬರೆಯಬೇಡಿ. ಇದರಿಂದ ಅನೇಕರಿಗೆ ಭಯವಾಗುತ್ತದೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments