Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಹೃದಯಾಘಾತದಿಂದ ಸಾವು

Sampriya
ಬುಧವಾರ, 19 ಜೂನ್ 2024 (15:14 IST)
Photo Courtesy X
ಹೈದರಾಬಾದ್‌: ಟಾಲಿವುಡ್‌ ಮೆಗಾಸ್ಟಾರ್ ಚಿರಂಜೀವಿ ಅವರ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

 ಶಿರೀಶ್ ಮತ್ತು ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು. ಅಸಲಿಗೆ ಈ ವಿವಾಹಕ್ಕೆ ಚಿರಂಜೀವಿ ಅವರ ತೀವ್ರ ವಿರೋಧವಿತ್ತು, ಹಾಗಾಗಿ ಕುಟುಂಬಕ್ಕೆ ತಿಳಿಯದೆ ಶಿರೀಶ್ ಹಾಗೂ ಶ್ರೀಜಾ ವಿವಾಹವಾಗಿದ್ದರು. ಆದರೆ, ಬಳಿಕ ಶ್ರಿಜಾ ಅವರು ಶೀರೀಶ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. 

ಶಿರೀಶ್ ಕಳೆದ ಕೆಲವು ತಿಂಗಳಿನಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೆ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶಿರೀಶ್ ಹಾಗೂ ಶ್ರೀಜಾ ಕುಟುಂಬದವರನ್ನು ಎದುರು ಹಾಕಿಕೊಂಡು ವಿವಾಹವಾಗಿದ್ದು ಭಾರಿ ವಿವಾದ ಎಬ್ಬಿಸಿತ್ತು. ಆ ಸಮಯದಲ್ಲಿ ಪವನ್ ಕಲ್ಯಾಣ್ ಸೇರಿದಂತೆ ಕೆಲವರಿಂದ ತಮಗೆ ಬೆದರಿಕೆ ಇರುವುದಾಗಿ ಶ್ರೀಜಾ ದೂರು ಸಹ ದಾಖಲಿಸಿದ್ದರು.

ಶ್ರೀಜಾ ಹಾಗೂ ಶಿರೀಶ್ ಮದುವೆಯಾದ ಕೆಲ ವರ್ಷಗಳಲ್ಲಿ ಅವರಿಗೆ ಮಗಳೊಬ್ಬಳು ಜನಿಸಿದಳು. ಅದಾದ ಬಳಿಕ ಶ್ರೀಜಾ ಶಿರೀಶ್​ರಿಂದ ವಿಚ್ಛೇದನ ಪಡೆದು ಮರು ಮದುವೆ ಆದರು. ಆ ಬಳಿಕ ಶಿರೀಶ್ ಸಹ ಮತ್ತೊಂದು ಮದುವೆಯಾದರು. ವೃತ್ತಿಯಲ್ಲಿ ವಕೀಲರಾಗಿದ್ದ ಶಿರೀಶ್, ಬಿಜೆಪಿ ಪಕ್ಷ ಸೇರ್ಪಡೆಗೊಂಡು ರಾಜಕೀಯ ಪಯಣವನ್ನೂ ಸಹ ಆರಂಭಿಸಿದ್ದರು. ಆದರೆ ರಾಜಕೀಯದಲ್ಲಿ ಹೆಚ್ಚಿಗೇನು ಸಾಧಿಸಲಾಗಲಿಲ್ಲ. ಶ್ರೀಜಾ ಹಾಗೂ ಶಿರೀಶ್ ಅವರ ಪುತ್ರಿಯನ್ನು ಮೆಗಾಸ್ಟಾರ್ ಚಿರಂಜೀವಿಯೇ ಸಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments