Webdunia - Bharat's app for daily news and videos

Install App

ಮತ್ತೆ ಬಣ್ಣ ಹಚ್ಚಲಿರುವ ಮೇಘನಾ ರಾಜ್: ಚಿರು ಬರ್ತ್ ಡೇ ದಿನ ಗುಡ್ ನ್ಯೂಸ್

Webdunia
ಶನಿವಾರ, 16 ಅಕ್ಟೋಬರ್ 2021 (10:54 IST)
ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಅಕಾಲಿಕ ಮರಣದ ಬಳಿಕ ಚಿತ್ರರಂಗದಿಂದ ದೂರವೇ ಉಳಿದಿರುವ ನಟಿ ಮೇಘನಾ ರಾಜ್ ಮಗ ರಾಯನ್ ಸರ್ಜಾ ಆರೈಕೆಯಲ್ಲೇ ಕಾಲ ಕಳೆದಿದ್ದಾರೆ. ಇದೀಗ ಮತ್ತೆ ಬಣ್ಣದ ಲೋಕಕ್ಕೆ ಮರಳುವ ಸೂಚನೆ ನೀಡಿದ್ದಾರೆ.

 

ಚಿರು ಅಗಲಿದ ಬಳಿಕ ಜಾಹೀರಾತು ಶೂಟಿಂಗ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಮೇಘನಾ ಬಣ್ಣ ಹಚ್ಚಿರಲಿಲ್ಲ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಜನ ಬಯಸಿದರೆ ಮತ್ತೆ ಅಭಿನಯಿಸಲು ರೆಡಿ ಎಂದಿದ್ದರು.

ಮೊನ್ನೆಯಷ್ಟೇ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸದ್ಯದಲ್ಲೇ ನೀವೆಲ್ಲಾ ನಿರೀಕ್ಷಿಸುತ್ತಿರುವ ಸುದ್ದಿ ಕೊಡುವುದಾಗಿ ಹೇಳಿಕೊಂಡಿದ್ದರು. ಅದರಂತೆ ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿರುವ ಸುದ್ದಿ ಕೊಟ್ಟಿದ್ದಾರೆ. ಸ್ನೇಹಿತ ಪನ್ನಗಾಭರಣ ನಿರ್ಮಾಣದಲ್ಲಿ ಹೊಸ ಸಿನಿಮಾವೊಂದನ್ನು ಮೇಘನಾ ಒಪ್ಪಿಕೊಂಡಿದ್ದಾರಂತೆ. ಅಕ್ಟೋಬರ್ 17 ರಂದು ಚಿರು ಸರ್ಜಾ ಜನ್ಮದಿನವಾಗಿದ್ದು, ಅದೇ ದಿನ ತಮ್ಮ ಕಮ್ ಬ್ಯಾಕ್ ಸಿನಿಮಾ ಮುಹೂರ್ತದ ಸುದ್ದಿ ಕೊಡಲಿದ್ದಾರೆ ಮೇಘನಾ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments