Webdunia - Bharat's app for daily news and videos

Install App

ನಟ ಅನಿರುದ್ಧ್ ಮನೆಗೆ ಶಾಸಕಿ ಸೌಮ್ಯ ರೆಡ್ಡಿ ದಿಡೀರ್ ಭೇಟಿಗೆ ಕಾರಣವೇನು ಗೊತ್ತಾ?

Webdunia
ಶುಕ್ರವಾರ, 8 ಜನವರಿ 2021 (10:40 IST)
ಬೆಂಗಳೂರು: ನಟ ಅನಿರುದ್ಧ್ ಮನೆಗೆ ನಿನ್ನೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ದಿಡೀರ್ ಭೇಟಿ ನೀಡಿದ್ದು, ಈ ಭೇಟಿಯ ಹಿಂದಿನ ಕಾರಣವನ್ನು ಸ್ವತಃ ಅನಿರುದ್ಧ್ ಹೇಳಿಕೊಂಡಿದ್ದಾರೆ.


ಅನಿರುದ್ಧ್ ಇತ್ತೀಚೆಗೆ ಕಸ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆದು ಸ್ವಚ್ಛತೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವಿಚಾರವಾಗಿ ಶಾಸಕಿ ಸೌಮ್ಯ ರೆಡ್ಡಿ ಅನಿರುದ್ಧ್ ಮನೆಗೆ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅನಿರುದ್ಧ್ ತಮ್ಮ ಪರಿಕಲ್ಪನೆಗಳ ಕುರಿತು ಶಾಸಕಿ ಜೊತೆ ಚರ್ಚೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಅನಿರುದ್ಧ್ ಗುಜರಾತ್ ಮಾದರಿಯಲ್ಲಿ ಕಾಲುವೆಗಳ ಮೇಲೆ ಸೌರ ಫಲಕವನ್ನು ಹಾಕುವ ಯೋಜನೆ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಈ ಯೋಜನೆ ಬಗ್ಗೆ ಹಾಗೂ ನಗರದಲ್ಲಿ ಕಸ ವಿಲೇವಾರಿಗೆ ತಮ್ಮ ಜೊತೆ ಜೊತೆಯಲಿ ಧಾರವಾಹಿಯಲ್ಲಿ ಹೇಳಿದಂತೆ ಹಸಿ ಕಸ ನೀಡಿ ಹಣ ಪಡೆಯುವ ‘ಆರ್ಯವರ್ಧನ್ ಯೋಜನೆ’ ಬಗ್ಗೆ ಶಾಸಕಿ ಜತೆ ಚರ್ಚೆ ನಡೆಸಿದ್ದಾರೆ. ಈ ಸಮಾಜಪರ ಕೆಲಸಗಳ ಬಗ್ಗೆ ತಮ್ಮ ಪರಿಕಲ್ಪನೆಗಳಿಗೆ ಶಾಸಕಿ ಸೌಮ್ಯ ರೆಡ್ಡಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಬೆಂಬಲ ನೀಡಿದ್ದಾರೆ ಎಂದು ಅನಿರುದ್ಧ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments