Webdunia - Bharat's app for daily news and videos

Install App

Mohanlal: ಸೇನಾ ಸಮವಸ್ತ್ರದಲ್ಲಿ ವಯನಾಡಿನಲ್ಲಿ ಕಾರ್ಯಾಚರಣೆಗಿಳಿದೇ ಬಿಟ್ಟ ಸೂಪರ್ ಸ್ಟಾರ್ ಮೋಹನ್ ಲಾಲ್ (Video)

Krishnaveni K
ಶನಿವಾರ, 3 ಆಗಸ್ಟ್ 2024 (11:21 IST)
Photo Credit: Facebook
ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದಾಗಿ ನೂರಾರು ಜನರು ಪ್ರಾಣ, ಮನೆ ಮಠ ಕಳೆದುಕೊಂಡಿದ್ದಾರೆ. ಈ ಕಂಡು ಕೇಳರಿಯದ ದುರಂತಕ್ಕೆ ಇಡೀ ದೇಶವೇ ಮರುಗಿದೆ.

ಇದೀಗ ವಯನಾಡಿನ ಜನರ ಸಹಾಯಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಹಲವರು ತಮ್ಮಿಂದಾದ ಪ್ರಯತ್ನ ಮಾಡುತ್ತಿದ್ದಾರೆ. ಸಿನಿಮಾ ತಾರೆಯರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಲಕ್ಷ ಲಕ್ಷ ಹಣ ದೇಣಿಗೆ ನೀಡಿದ್ದಾರೆ. ಆದರೆ ಈ ಲಿಸ್ಟ್ ನಲ್ಲಿ ಸೂಪರ್ ಸ್ಟಾರ್ ಮೋಹನ್ ಲಾಲ್ ಹೆಸರಿರಲಿಲ್ಲ ಎನ್ನುವುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಆದರೆ ಮೋಹನ್ ಲಾಲ್ ದೇಣಿಗೆ ನೀಡಿ ಕೈ ತೊಳೆದುಕೊಂಡಿಲ್ಲ. ಸ್ವತಃ ತಾವೇ ವಯನಾಡಿನಲ್ಲಿ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ನಟ ಮೋಹನ್ ಲಾಲ್ ಭಾರತೀಯ ಸೇನೆಯ ಗಡಿ ಭದ್ರತಾ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಹುದ್ದೆಯ ಗೌರವ ಹೊಂದಿದ್ದಾರೆ.

ಇದೀಗ ಸೇನಾ ಸಮವಸ್ತ್ರದಲ್ಲೇ ಗುಡ್ಡ ಕುಸಿತವಾದ ಸ್ಥಳಕ್ಕೆ ಬಂದ ಮೋಹನಲ್ ಲಾಲ್ ಯೋಧರಿಂದ ಪರಿಹಾರ ಕಾರ್ಯದ ಮಾಹಿತಿ ಪಡೆದಿದ್ದಾರೆ. ಬಳಿಕ ಸೇನೆಯ ರಕ್ಷಣಾ ಕಾರ್ಯದಲ್ಲಿ ತಾವೂ ತೊಡಗಿಸಿಕೊಂಡಿದ್ದಾರೆ. ಮೋಹನ್ ಲಾಲ್ ಅವರ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments