ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಯಶಸ್ವಿನಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರ ನಿರ್ಮಾಣದಲ್ಲಿ ತಯಾರಾಗುತ್ತಿರುವ ಚಿತ್ರ ಬೆಳ್ಳಿ. ಶಿವರಾಜಕುಮಾರ್ ಹಾಗೂ ಕೃತಿ ಖರಬಂಧ ಅವರು ಶಶಾಂಕ್ ಅವರು ಬರೆದಿರುವ ಜನಿಸಿದೆ ಅನಿಸಿದೆ ಹಾಡಿನಲ್ಲಿ ಅಭಿನಯಿಸಿದ್ದಾರೆ.ಇದಕ್ಕೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಗೀತೆಯ ಚಿತ್ರೀಕರಣ ಸಕಲೇಶಪುರದಲ್ಲಿ ನಡೆದಿದೆ.
ವಿ.ಶ್ರೀಧರ್ ಸಂಗೀತ ,ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ,ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಬೆಳ್ಳಿಯ ಹೊಳಪನ್ನು ಹೆಚ್ಚು ಮಾಡಿದೆ.
.........ಇನ್ನು ಇದೆ. ಮುಂದೆ ಓದಿ.
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಕೃತಿ ಖರಬಂಧ, ವಿನೋದ್ ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ,ರಮೇಶ್ ಭಟ್, ನಾಗರಾಜ್, ಹರೀಶ್ ರೈ, ಲೋಕಿ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ.