Webdunia - Bharat's app for daily news and videos

Install App

ವಿನಯ್ ರಾಜ್ ಕುಮಾರ್ ಸಿದ್ಧಾರ್ಥ ಈಗ ಹೈದರಾಬಾದ್ ಕಡೆಗೆ ಪಯಣ ..

Webdunia
ಗುರುವಾರ, 21 ಆಗಸ್ಟ್ 2014 (09:54 IST)
ಡಾ. ರಾಜ್ಪೂ ಕುಮಾರ್ ಕುಟುಂಬದ ಮೂರನೇ ಪೀಳಿಗೆ  ಚಿತ್ರರಂಗಕ್ಕೆ ಎಂಟ್ರಿ ಆಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್  ಅವರ ಮಗ ವಿನಯ್ ರಾಜ್ ಕುಮಾರ್ ಅವರು  ಸಿನಿಮಾದಲ್ಲಿ ನಟಿಸುವುದಕ್ಕೆ ಆರಂಭಿಸಿದ್ದಾರೆ. ಸಿದ್ಧಾರ್ಥ ಅವರ ಮೊದಲ ಚಿತ್ರ. ಪೂರ್ಣಿಮಾ  ಎಂಟರ್ಪ್ರೈಸಸ್ ಲಾಂಛನದಡಿಯಲ್ಲಿ ಡಾ. ರಾಜ್ ಕುಮಾರ್ ಅರ್ಪಿಸಿ ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್  ನಿರ್ಮಿಸುತ್ತಿರುವ  ಸಿದ್ಧಾರ್ಥ .  ಅತ್ಯಂತ ಅದ್ಧೂರಿಯಿಂದ ಸಿದ್ಧ ಆಗುತ್ತಿರುವ  ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣ ಆಗಿದೆ.  ಉಳಿದ ದಿನಗಳನ್ನು ಹೈದರಾಬಾದ್ ನಲ್ಲಿ  ಚಿತ್ರೀಕರಣ ಮಾಡಲು ಚಿತ್ರತಂಡ ಇದೆ ತಿಂಗಳು 22 ರಂದು ಅಂದರೆ ನಾಳೆಯಿಂದ ಮಾಡಲು  ಸಿದ್ಧತೆ ನಡೆಸಿದೆ. ಸುಮಾರು ಐದು ದಿವಸಗಳ ಕಾಲ ಹೈದರಾಬಾದ್ ಸುತ್ತಮುತ್ತಚಿತ್ರೀಕರಣ ನಡೆಯಲಿದೆ.
 
ಕೆಲವೊಂದು ಸನ್ನಿವೇಶಗಳು ಹಾಗೂ ಗೀತೆಗಳ ಚಿತ್ರೀಕರಣ ಬಾಕಿ ಇದೆ.  ಹೈದರಾಬಾದ್  ಬಳಿಕ ಚಿತ್ರತಂಡ ಗೋವಾದತ್ತ  ಪ್ರಯಾಣ ಬೆಳಸಲಿದೆ. ಈ ಸಂಗತಿ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ. ರಘು ಸಮರ್ಥ ಸಂಭಾಷಣೆ, ಜಯಂತ್ ಕಾಯ್ಕಿಣಿ ಸಾಹಿತ್ಯ , ಎಂ.ವಿ. ಕೃಷ್ಣಕುಮಾರ್  ಛಾಯಾಗ್ರಹಣ,  ವಿ.ಹರಿಕೃಷ್ಣ ಸಂಗೀತ ಚಿತ್ರಕ್ಕಿದೆ. ಚಿತ್ರಕಥೆ ಮತ್ತು ನಿರ್ದೇಶನದ ಹೊಣೆ ಪ್ರಕಾಶ್ ಜಯರಾಂ ರಾಮ್ ಹೊತ್ತಿದ್ದಾರೆ.ಅಪೂರ್ವ ಅರೋರ, ಆಶಿಷ್ ವಿದ್ಯಾರ್ಥಿ, ಅಚ್ಯುತಕುಮಾರ್, ಸಾಧುಕೋಕಿಲ, ಅಶೋಕ್, ಸುಧಾರಾಣಿ, ಮುಂತಾದವರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments