Webdunia - Bharat's app for daily news and videos

Install App

ಶ್ರುತಿ ಮನೆಕೆಲಸದಾಕೆಯ ಪ್ರಕರಣಕ್ಕೆ ಹೊಸ ತಿರುವು ...

Webdunia
ಸೋಮವಾರ, 22 ಸೆಪ್ಟಂಬರ್ 2014 (11:26 IST)
ತನ್ನ ಪಾಡಿಗೆ ತಾನು ಇದ್ದರೂ ಬೇಡದ ವಿವಾದದಲ್ಲಿ ಸಿಕ್ಕಿ ಹಾಕಿಕೊಳ್ಳುವಂತಾಗಿದೆ ನಟಿ ಶ್ರುತಿ ಅವರಿಗೆ. ತಮ್ಮ ಅಭಿನಯದ ಮೂಲಕ ಮನ ಗೆದ್ದು ಸುದ್ದಿ  ಆಗಿದ್ದ ಶ್ರುತಿ ತಮ್ಮ ರಿಯಲ್ ಬದುಕಿನಿಂದಲೂ ಸಹಿತ ಸಾಕಷ್ಟು ಸುದ್ದಿ ಆದರು. ಆಕೆಯ ಮನೆ ಕೆಲಸದಾಕೆಯೇ ಶ್ರುತಿ ಬಗ್ಗೆ ಇಲ್ಲಸಲ್ಲದ್ದು ಹೇಳಿ  ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈಗ ಈ ಬಗ್ಗೆ ಮನೆ ಕೆಲಸದಾಕೆ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ನಟಿ ಶೃತಿ ನಗರದ 5ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬೇರೆಯವರ ಮಾತುಕೇಳಿ ತನ್ನ ಬಗ್ಗೆ ಬೇಡದ ಅಪವಾದ ಮಾಡಿರುವ ಮನೆಕೆಲಸದಾಕೆ ಈ ಮುಖಾಂತರ ಸಮಾಜದಲ್ಲಿ ತನ್ನ ಬಗ್ಗೆ ಕೆಟ್ಟ ಹೆಸರನ್ನು ತರುವ ಪ್ರಯತ್ನ ಮಾಡುತ್ತಿದ್ದಾರೆ  ಎನ್ನುವ ಸಂಗತಿಯನ್ನು ನ್ಯಾಯಾಲಯದ ಮುಂದೆ ಹೇಳಿ ತನಗೆ  ನ್ಯಾಯ ದೊರಕಿಸಿಕೊಡ ಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.
 
ಶ್ರುತಿ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ನಟಿ ಶ್ರುತಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮನೆಕೆಲಸದಾಕೆ ಶೋಭಾ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರುತಿ ತಮ್ಮ ಬಗ್ಗೆ ಹರಡಿರುವ ಸುದ್ದಿಗೆ ಬೇಸತ್ತು ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೊಕ್ಕಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments