Webdunia - Bharat's app for daily news and videos

Install App

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

Sampriya
ಬುಧವಾರ, 23 ಜುಲೈ 2025 (19:33 IST)
Photo Credit X
ಬೆಂಗಳೂರು: ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೇಲರ್‌ ಇಂದು ರಿಲೀಸ್‌ ಆಗಿದೆ. ದಿಯಾ ಸಿನಿಮಾದಲ್ಲಿ ಚಾಕಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ ಅಂಬರ್‌ ಈ ಚಿದ್ರದಲ್ಲಿ ಆಕ್ಷನ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. 

ನಟ ಯಶ್‌ ತಾಯಿ ನಿರ್ಮಾಣದ ಚೊಚ್ಚಲ ಸಿನಿಮಾ ಇದಾಗಿದೆ. ಇಂದು ಬಿಡುಗಡೆ ಆಗಿರುವ 2:24 ನಿಮಿಷದ ಟ್ರೈಲರ್ ಸಿನಿಮಾದ ರೀತಿಯೇ ಥ್ರಿಲ್ಲಿಂಗ್ ಆಗಿದೆ. ಹೆಸರೇ ಸೂಚಿಸುತ್ತಿರುವಂತೆ ಒಂದು ಹಳ್ಳಿಯ ಕತೆಯನ್ನು ಸಿನಿಮಾ ಒಳಗೊಂಡಿದೆ. 

ಸಿನಿಮಾ ನಿರ್ದೇಶನ ಮಾಡಿರುವುದು ಶ್ರೀರಾಜ್. ಸಿನಿಮಾನಲ್ಲಿ ನಾಯಕಿಯಾಗಿ ಕಾವ್ಯಾ ಶೈವ ನಟಿಸಿದ್ದಾರೆ. ಅವಿನಾಶ್, ಮಾನಸಿ ಸುಧೀರ್, ರಘು ರಾಮನಕೊಪ್ಪ ಇನ್ನಿತರೆ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ.

ಕೊತ್ತಲವಾಡಿ ಟ್ರೈಲರ್​ನ ಆರಂಭದಲ್ಲಿ ಹಾಸ್ಯ, ಪ್ರೇಮ, ಬಂಧ, ಅನುಬಂಧಗಳ ಕತೆ ಇದಾಗಿರಬಹುದು ಎಂಬ ಅನುಮಾನ ಮೂಡಿಸುವಂತೆ ಮಾಡುವ ಟ್ರೈಲರ್ ಆ ನಂತರ ಆಕ್ಷನ್‌ ಲೋಕಕ್ಕೆ ಕರೆದೊಯ್ಯುತ್ತದೆ. ಹಳ್ಳಿಯೊಂದರಲ್ಲಿ ಇಬ್ಬರು ಆತ್ಮೀಯರ ಮಧ್ಯೆ ನಡೆಯುವ ಅಧಿಕಾರಕ್ಕಾಗಿ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿರುವ ಸುಳಿವನ್ನು ಕೊತ್ತಲವಾಡಿ ಟ್ರೈಲರ್ ನೀಡುತ್ತಿದೆ.  

ಪೃಥ್ವಿ ಆಕ್ಷನ್ ಹಿರೋ ಆಗಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್​​ನಲ್ಲಿ ನಟ ಗೋಪಾಲ ದೇಶಪಾಂಡೆ ಅವರೂ ಗಮನ ಸೆಳೆಯುತ್ತಾರೆ. ರಾಜೇಶ್ ನಟರಂಗ ಅವರು ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಜೀವತುಂಬಿದ್ದಾರೆ. ಕಾಂತಾರದಲ್ಲಿ ಗಮನ ಸೆಳೆದಿದ್ದ ಮಾನಸಿ ಸುಧೀರ್‌ ಅವರೂ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಮುಂದಿನ ಸುದ್ದಿ
Show comments