Select Your Language

Notifications

webdunia
webdunia
webdunia
webdunia

ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರು ಜಪ್ತಿ

ಕೊಲೆ ಪ್ರಕರಣ: ಅಪಹರಣಕ್ಕೆ ದರ್ಶನ್ ಗ್ಯಾಂಗ್ ಬಳಸಿದ್ದ ಕಾರು ಜಪ್ತಿ

Sampriya

ಚಿತ್ರದುರ್ಗ , ಭಾನುವಾರ, 16 ಜೂನ್ 2024 (16:16 IST)
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ತಂಡವು ಸಂತ್ರಸ್ತನ ಅಪಹರಣಕ್ಕೆ ಬಳಸಲಾಗಿದ್ದ ಕಾರನ್ನು ಭಾನುವಾರ ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬಾತ ಚಿತ್ರದುರ್ಗ ಜಿಲ್ಲೆಯ ಅಯ್ಯನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಕಾರನ್ನು ನಿಲ್ಲಿಸಿದ್ದ. ಪೊಲೀಸರು ವಾಹನವನ್ನು ವಶಪಡಿಸಿಕೊಳ್ಳುವಾಗ ವಿಧಿವಿಜ್ಞಾನ ತಜ್ಞರು ಹಾಜರಿದ್ದರು.

ಪೊಲೀಸರು ರವಿ ಕುಟುಂಬದವರನ್ನು ವಿಚಾರಣೆಗೊಳಪಡಿಸಿ ಕಾರಿನಲ್ಲಿದ್ದ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್‌ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ರುವ ಸರ್ಜಾ ನಟನೆಯ ಸೂಪರ್‌ ಹಿಟ್‌ ಬಹದ್ದೂರ್ ಜೂನ್‌ 21ರಂದು ರೀ ರಿಲೀಸ್