Webdunia - Bharat's app for daily news and videos

Install App

ಸಂಗೀತ ನಿರ್ದೇಶಕ ಸಾಧು ಕೋಕಿಲ ಸಿಸಿಬಿ ಪೊಲೀಸರನ್ನು ಭೇಟಿ ಮಾಡಿದ್ಯಾಕೆ?

Webdunia
ಮಂಗಳವಾರ, 10 ಜುಲೈ 2018 (18:42 IST)
ಬೆಂಗಳೂರು : ರೌಡಿ ಶೀಟರ್ ಸೈಕಲ್ ರವಿಗೆ ನಿರಂತರವಾಗಿ ಮೊಬೈಲ್ ಕರೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನ ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


ಜೂನ್ 27ರಂದು ರಾಜರಾಜೇಶ್ವರಿನಗರದ ನೈಸ್‍ರೋಡ್ ಬಳಿ ರೌಡಿ ಸೈಕಲ್ ರವಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಂಗ ಬಂಧನದಲ್ಲಿ ಇರಿಸಿಕೊಂಡು ತನಿಖೆ ನಡೆಸಿದ್ದರು. ಆ ವೇಳೆ ಸೈಕಲ್ ರವಿಗೆ ಸಾಧು ಕೋಕಿಲಾ ಏಳೆಂಟು ಬಾರಿ ಕರೆ ಮಾಡಿದ್ದ ಬಗ್ಗೆ ಸಾಕ್ಷ್ಯ ಸಿಕ್ಕಿದ ಹಿನ್ನೆಲೆಯಲ್ಲಿ ಸಾಧುಕೋಕಿಲಾರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಸಿಬಿ ಕಚೇರಿಗೆ ತೆರಳಿದ ಸಾಧು ಕೋಕಿಲ, ಅಲ್ಲಿ ಹಿರಿಯ ಅಧಿಕಾರಿಯನ್ನು ಭೇಟಿ ಮಾಡಿದರು. ವಿಚಾರಣೆಯ ವೇಳೆ  ತಮಗೂ ಸೈಕಲ್ ರವಿಗೂ ಸಂಬಂಧವಿಲ್ಲ. ಆದರೂ ಈ ಪ್ರಕರಣದಲ್ಲಿ ತಮ್ಮ ಹೆಸರು ಏಕೆ ಕೇಳಿಬರುತ್ತಿದೆ ಎಂದು ವಿಚಾರಿಸಿದರು ಎನ್ನಲಾಗಿದೆ. ಕಚೇರಿಯಿಂದ ಹೊರಬಂದ ಸಾಧು ಕೋಕಿಲ, ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments