Webdunia - Bharat's app for daily news and videos

Install App

ನನ್ನಮ್ಮ ತೂಗುದೀಪರ ಮಗನನ್ನು ಬಿಟ್ಟುಕೊಡಬೇಡ ಎನ್ನುತ್ತಿದ್ದರು: ವಿನೋದ್ ರಾಜ್

Sampriya
ಸೋಮವಾರ, 22 ಜುಲೈ 2024 (15:40 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ವಿನೋದ್ ರಾಜ್ ಆಗಮಿಸಿದ್ದರು. ಇನ್ನೂ ದಿನಕ್ಕೆ ಒಂದೇ ಭೇಟಿ ಅಂತ ಜೈಲು ಅಧಿಕಾರಿಗಳು ಹೇಳಿದ್ದರಿಂದ ವಿನೋದ್ ರಾಜ್ ಅವರು ವಾಪಾಸ್ಸಾಗಿದ್ದಾರೆ.

ಈ ವೇಳೆ ಮಾಧ್ಯಮದ ಜತೆ ಮಾತನಾಡಿದ ಅವರು, ಅಧಿಕಾರಿಗಳು ದಿನದಲ್ಲಿ ಒಂದೇ ಭೇಟಿಗೆ ಅವಕಾಶ ಎಂದು ಹೇಳಿದರು. ಮಧ್ಯಾಹ್ನದ ನಂತರ ಅವರ ಕುಟುಂಬದವರ ಜತೆ ದರ್ಶನ್ ಅವರನ್ನು ಭೇಟಿಯಾಗುತ್ತೇನೆ.

ಇನ್ನೂ ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವೊಮ್ಮೆ ಊಹಿಸಲಾಗದ ಘಟನೆಗಳು ನಮ್ಮ ಜೀವನದಲ್ಲಿ ನಡೆದುಹೋಗುತ್ತದೆ. ಸದ್ಯ ದರ್ಶನ್‌ಗೆ ಇದು ಅಗ್ನಿ ಪರೀಕ್ಷೆಯ ಹೊತ್ತು. ನಮ್ಮ ತಾಯಿಗೆ ದರ್ಶನ್ ಮೇಲೆ ತುಂಬಾನೇ ಪ್ರೀತಿ. ಯಾವತ್ತೂ ತೂಗುದೀಪ್‌ರ ಮಗನನ್ನು ಬಿಟ್ಟುಕೊಡಬೇಡ ಎಂದು ಆಗಾಗ ನನಗೆ ಹೇಳುತ್ತಿದ್ದರು ಎಂದು ನೆನಪಿಸಿಕೊಂಡರು.

ನಮ್ಮ ತಾಯಿಗೆ ಆರೋಗ್ಯ ಸರಿಯಿಲ್ಲದಾಗ ದರ್ಶನ್ ಅವರು ಬಂದು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂತಹ ಸಂದರ್ಭದಲ್ಲಿ ಮಗನನ್ನು ಕಳೆದುಕೊಂಡವರ ನೋವು, ಮತ್ತೊಂದೆಡೆ ಕನ್ನಡ ಚಿತ್ರರಂಗಕ್ಕೆ ನೋವಾಗಿದೆ. ಯಾಕೆ ಹೀಗಾಯಿತು ಎಂಬುದು ನೆನಪಿಸಿಕೊಂಡಾಗ ಬೇಜಾರಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments