Webdunia - Bharat's app for daily news and videos

Install App

ಕುರುಕ್ಷೇತ್ರದಲ್ಲಿ ದ್ರೌಪದಿಯಾಗ್ತಾರಾ ನಯನತಾರಾ..?

Webdunia
ಬುಧವಾರ, 5 ಜುಲೈ 2017 (13:40 IST)
ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ಚಿತ್ರದಲ್ಲಿ ದಕ್ಷಿಣದ ಖ್ಯಾತ ನಟಿ ನಯನತಾರಾ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಯನತಾರಾ ಕುರುಕ್ಷೇತ್ರ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಜುಲೈ 23ರಿಂದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದ್ದು, ಚಿತ್ರದ ಪೂರ್ವ ತಯಾರಿಯಲ್ಲಿರುವ ಚಿತ್ರ ತಂಡ ನಯನತಾರಾಗೆ ಈ ಆಫರ್ ನೀಡಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಶ್ರೀರಾಮ ರಾಜ್ಯಂ ಚಿತ್ರದಲ್ಲಿ ಸೀತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನತಾರಾ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟಿ. ಹೀಗಾಗಿ, ದರೌಪದಿ ಪಾತ್ರಕ್ಕೆ ನಯನತಾರಾ ಹೆಸರು ಕೇಳಿಬಂದಿದೆ.

2011ರಲ್ಲಿ ತೆರೆ ಕಂಡ ಸೂಪರ್ ಚಿತ್ರದಲ್ಲಿ ನಯನತಾರಾ ಕಾಣಿಸಿಕೊಂಡಿದ್ದರು. ಇದೀಗ, ಮತ್ತೆ ಕನ್ನಡಕ್ಕೆ ಬರುವ ಸುದ್ದಿ ಹರಿದಾಡುತ್ತಿದೆ. ರವಿಚಂದ್ರನ್ ಈ ಚಿತ್ರದಲ್ಲಿ ಕೃಷ್ಣನ ಪಾತ್ರ ನಿರ್ವಹಿಸುತ್ತಿದ್ದು, ದರ್ಶನ್ ಧುರ್ಯೋದನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾಗಣ್ಣ ಚಿತ್ರ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ.. ಸಿನಿಮಾದಲ್ಲಿ ಪಾತ್ರಕ್ಕಾಗಿ ಸೆಕ್ಸ್ ವಿವಾದದ ಬಗ್ಗೆ ಬಾಯ್ಬಿಟ್ಟ ಗೌತಮಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments