Webdunia - Bharat's app for daily news and videos

Install App

ಮೊದಲು ವೋಟ್ ಹಾಕಿ ಆಮೇಲೆ ಮಾತನಾಡಿ: ದೇಶ ಪ್ರಗತಿ ಕಂಡಿದೆ ಎಂದ ರಶ್ಮಿಕಾ ಮಂದಣ್ಣ ಟ್ರೋಲ್

Krishnaveni K
ಬುಧವಾರ, 15 ಮೇ 2024 (12:45 IST)
ಮುಂಬೈ: ಲೋಕಸಭೆ ಚುನಾವಣೆ ನಡೆಯುತ್ತಿರುವಾಗಲೇ ನಟಿ ರಶ್ಮಿಕಾ ಮಂದಣ್ಣ ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಹೊಗಳಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ಬಗ್ಗೆ ಮಾತನಾಡಿದ ರಶ್ಮಿಕಾ, ಮೊದಲು ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡೂವರೆ ಗಂಟೆ ಬೇಕಾಗುತ್ತಿತ್ತು. ಈಗ 20 ನಿಮಿಷದಲ್ಲಿ ಪ್ರಯಾಣಿಸಬಹುದು. ಅಸಾಧ‍್ಯವಾದುದನ್ನು ಮಾಡಿ ತೋರಿಸಿದ್ದಾರೆ. ಭಾರತ ಅಭಿವೃದ್ಧಿಯಾಗುತ್ತಿರುವುದು ನೋಡಿದರೆ ಹೆಮ್ಮೆಯಾಗುತ್ತದೆ ಎಂದಿದ್ದಾರೆ.

ಅವರ ಈ ಹೇಳಿಕೆ ವೈರಲ್ ಆಗಿದೆ. ಕಳೆದ 10 ವರ್ಷಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ. ಭಾರತ ವೇಗವಾಗಿ ಬೆಳೆಯುತ್ತಿದೆ. ಈ ಅಟಲ್ ಸೇತುವೆ ಏಳು  ವರ್ಷದಲ್ಲಿ ಪೂರ್ಣಗೊಂಡಿದೆಯಂತೆ. ಹೊಸ ಭಾರತ ಉದಯವಾಗುತ್ತಿದೆ. ಭಾರತ ವಿಶ್ವದ ಬುದ್ಧಿವಂತ ದೇಶ ಎಂದಿದ್ದಾರೆ.

ನಮ್ಮ ದೇಶದ ಪ್ರಗತಿ ಇಲ್ಲಿಗೇ ನಿಲ್ಲಬಾರದು. ಇದಕ್ಕಾಗಿ ದೇಶದ ಯುವಕರು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಬೇಕು ಎಂದು ಪರೋಕ್ಷವಾಗಿ ಮೋದಿ ಬೆಂಬಲಿಸಿ ಮಾತನಾಡಿದ್ದಾರೆ. ಆದರೆ ರಶ್ಮಿಕಾ ಈ ಕಾಮೆಂಟ್ ಗೆ ನೆಟ್ಟಿಗರು ಮೊದಲು ವೋಟ್ ಹಾಕಿ, ಆಮೇಲೆ ಈ ರೀತಿ ಭಾಷಣ ಬಿಗಿಯಿರಿ ಎಂದು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments