Webdunia - Bharat's app for daily news and videos

Install App

ಜಯಂತಿ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಅನು ಪ್ರಭಾಕರ್ ಗೆ ನೆಟ್ಟಿಗರ ಮೆಚ್ಚುಗೆ

Webdunia
ಮಂಗಳವಾರ, 27 ಜುಲೈ 2021 (09:06 IST)
ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಸಾವಿಗೆ ನಿನ್ನೆ ಅನೇಕ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ನಟಿ, ಜಯಂತಿ ಅವರ ಮಾಜಿ ಸೊಸೆ ಅನು ಪ್ರಭಾಕರ್ ಸಂತಾಪ ವ್ಯಕ್ತಪಡಿಸಿದ್ದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಅನು ಪ್ರಭಾಕರ್ ಈ ಮೊದಲು ಜಯಂತಿ ಅವರ ಪುತ್ರ ಕೃಷ್ಣ ಕುಮಾರ್ ಅವರನ್ನು ಮದುವೆಯಾಗಿದ್ದರು. ಆದರೆ ಬಳಿಕ ಇಬ್ಬರೂ ವಿಚ್ಛೇದನ ಪಡೆದುಕೊಂಡಿದ್ದರು.

ಹಾಗಿದ್ದರೂ ಅನು ಪ್ರಭಾಕರ್ ಈಗ ಜಯಂತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಲ್ಲದೆ, ನಿಮ್ಮ ಜೊತೆ ಕಳೆದ ಪ್ರತೀ ಕ್ಷಣ ಸ್ಮರಣೀಯವಾಗಿರುತ್ತೆ ಮಾಮ್. ನಿಮ್ಮಿಂದ ನಾನು ಅನೇಕ ವಿಚಾರಗಳನ್ನು ಕಲಿತೆ. ನಿಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಈ ವಿಚಾರದ ಬಗ್ಗೆ ಎಷ್ಟೋ ಬಾರಿ ನನ್ನ ಹತ್ರ ಮಾತಾಡಿದ್ರಿ. ಅಮ್ಮಮ್ಮನ ಜೊತೆ ನೆಮ್ಮದಿಯಾಗಿರಿ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಜಯಂತಿ ಜೊತೆಗಿನ ಆತ್ಮೀಯ ಕ್ಷಣದ ಫೋಟೋ ಪ್ರಕಟಿಸಿದ್ದರು. ಈ ಪೋಸ್ಟ್ ನೋಡಿ ಕಾಮೆಂಟ್ ಮಾಡಿರುವ ನೆಟ್ಟಿಗರು, ನಿಮ್ಮ ಹೃದಯ ವೈಶಾಲ್ಯತೆಗೆ ನಮಸ್ಕಾರ. ಹಳೆಯದನ್ನು ಯಾವುದನ್ನೂ ಮನಸ್ಸಲ್ಲಿಟ್ಟುಕೊಳ್ಳದೇ ಸಂತಾಪ ಸೂಚಿಸಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments