Webdunia - Bharat's app for daily news and videos

Install App

ರಾಹುಲ್ ಗಾಂಧಿ, ರೇವಂತ್ ರೆಡ್ಡಿ ಪರ ಪ್ರಚಾರ ನಡೆಸಲಿಲ್ಲ ಎಂದು ಅಲ್ಲು ಅರ್ಜುನ್ ಟಾರ್ಗೆಟ್ ಎಂದ ನೆಟ್ಟಿಗರು

Krishnaveni K
ಮಂಗಳವಾರ, 24 ಡಿಸೆಂಬರ್ 2024 (11:29 IST)
ಹೈದರಾಬಾದ್: ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಮತ್ತು ಕಾಂಗ್ರೆಸ್ ನಾಯಕರ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

ಅಲ್ಲು ಅರ್ಜುನ್ ವಿರುದ್ಧ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನನ್ವಯ ಇಂದು ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಅದರಂತೆ ಇದೀಗ ತಾನೇ ಅವರು ಪೊಲೀಸ್ ಠಾಣೆ ತಲುಪಿದ್ದಾರೆ.

ಮೊನ್ನೆಯಿಂದ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಕಾಂಗ್ರೆಸ್ ನಾಯಕರು ಅಲ್ಲು ಅರ್ಜುನ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೆ, ಕೆಲವು ಕಿಡಿಗೇಡಿಗಳ ಗುಂಪು ಮಹಿಳೆ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಅಲ್ಲು ಮನೆಗೆ ಕಲ್ಲೆಸೆಯುವ ಮಟ್ಟಕ್ಕೂ ಹೋಗಿದ್ದರು.

ಈ ಗಲಾಟೆ ಮಧ್ಯೆ ನೆಟ್ಟಿಗರು ಇದೆಲ್ಲಾ ಕಾಂಗ್ರೆಸ್ ನಾಯಕರ ಪಿತೂರಿ ಎಂದು ದೂರಿದ್ದಾರೆ. ಈ ಮೊದಲು ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ರೇವಂತ್ ರೆಡ್ಡಿ ಪರ ಪ್ರಚಾರ ಮಾಡಲು ಅಲ್ಲು ಅರ್ಜುನ್ ಒಪ್ಪಿರಲಿಲ್ಲ. ಆ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ಮುಂದಿನ ಸುದ್ದಿ
Show comments