Webdunia - Bharat's app for daily news and videos

Install App

ಸುದೀಪ್ ದಂಪತಿ ವಿಚ್ಛೇದನ ಪ್ರಕರಣಕ್ಕೆ ಹೊಸ ಟ್ವಿಸ್ಟ್

Webdunia
ಗುರುವಾರ, 9 ಮಾರ್ಚ್ 2017 (18:00 IST)
ಕಿಚ್ಚ ಸುದೀಪ್ - ಪ್ರಿಯಾ ದಂಪತಿ ವಿಚ್ಛೇದನ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇಂದು ಸಹ ಅವರಿಬ್ಬರು ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. 
ನಗರದ ಪ್ರಧಾನ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ಸುದೀಪ್ ಸಹೋದರಿ ಸುಜಾತ ಹಾಗೂ ಅವರ ಪರ ವಕೀಲರು ಹಾಜರಿದ್ದರು. 
 
ದಂಪತಿ ಗೈರು ಹಾಜರಿ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದ ಕೋರ್ಟ್ ರಾಜಿ ಸಂಧಾನ ಮಾಡಿಕೊಂಡಿದ್ದರೆ ತಿಳಿಸಿ.ಡಿವೋರ್ಸ್ ಅರ್ಜಿ ಹಿಂಪಡೆಯಿರಿ. ಇಲ್ಲವಾದರೆ ವಿಚ್ಛೇದನದ ಬಗ್ಗೆ ಕೋರ್ಟ್​ನಿಂದಲೇ ವಿಚಾರಣೆ ನಡೆಸಲಾಗುವುದು. ನಂತರ ನ್ಯಾಯಾಲಯವೇ ಈ ಬಗ್ಗೆ ತೀರ್ಮಾನಿಸಲಿದೆ. ಸ್ವತಃ ವಿಚಾರಣೆ ನಡೆಸಿ ತೀರ್ಮಾನಿಸಲು ಕೋರ್ಟ್​ಗೆ ಅಧಿಕಾರವಿದೆ' ಎಂದಿದೆ.
 
ಸುದೀಪ್ ಪರ ವಕೀಲ ಭಾಸ್ಕರ್ ಬಾಬು' ಮತ್ತಷ್ಟು ಕಾಲಾವಕಾಶ ಕೋರಿದರು. ಕೊನೆಯ‌ ಅವಕಾಶವೆಂದು ಹೇಳಿದ ಕೋರ್ಟ್ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿತು.
 
2015ರ ಸೆಪ್ಟೆಂಬರ್ ನಲ್ಲಿ ಇಬ್ಬರು ಪರಸ್ಪರ ಸಹಮತದ ಮೇರೆಗೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಂದಿನಿಂದ ಇಂದಿನವರೆಗೂ ದಂಪತಿ ವಿಚಾರಣೆಗೆ ಹಾಜರಾಗಿಲ್ಲ. ಇಂದಿನ ವಿಚಾರಣೆಗೆ ಸಹ ಸುದೀಪ್, ಪತ್ನಿ ಪ್ರಿಯಾ, ಮತ್ತು ಪ್ರಿಯಾ ಅವರ ಪರ ವಕೀಲರು ಗೈರು ಹಾಜರಾಗಿದ್ದರು.
 
ಇತ್ತೀಚಿಗೆ ದಂಪತಿಗಳಿಬ್ಬರು ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಮಗಳ ಭವಿಷ್ಯದ ಹಿತದೃಷ್ಟಿಯಿಂದ ಇಬ್ಬರು ಒಂದಾಗಿದ್ದಾರೆ ಎಂದು ಸಹ ಸುದ್ದಿ ಹರಿದಾಡುತ್ತಿದೆ.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments