Webdunia - Bharat's app for daily news and videos

Install App

ಕೀರ್ತಿಗೌಡ ವಿರುದ್ಧ ನಾಗರತ್ನ ದಾಖಲಿಸಿದ ಹಲ್ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

Webdunia
ಸೋಮವಾರ, 29 ಅಕ್ಟೋಬರ್ 2018 (07:04 IST)
ಬೆಂಗಳೂರು : ನಟ ದುನಿಯಾ ವಿಜಯ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಅವರ ಮೂರನೇ ಪತ್ನಿ ಕೀರ್ತಿಗೌಡ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಿಜಯ್ ಅವರ  ಮೊದಲನೇ ಪತ್ನಿ ನಾಗರತ್ನ ದೂರು ದಾಖಲಿಸಿದ್ದರು, ಆದರೆ ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್  ಸಿಕ್ಕಿದೆ.

ಹೌದು. ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗ ಮಾರುತಿಗೌಡರನ್ನು ಅಪಹರಣ  ಮಾಡಿ, ಹಲ್ಲೆ ನಡೆಸಿದ ಆರೋಪದ ಮೇರೆಗೆ ವಿಜಯ್ ನ್ಯಾಯಾಂಗ ಬಂಧನದಲ್ಲಿದ್ದರು.  ಈ  ವೇಳೆ ವಿಜಯ್ ಅವರ ಮೊದಲನೇ ಪತ್ನಿ ನಾಗರತ್ನ ತನ್ನ ಮಕ್ಕಳನ್ನು ನೋಡಲು ಕೀರ್ತಿಗೌಡ ಮನೆಗೆ ಬಂದಿದಾಗ ಆಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾಗರತ್ನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

 

ಆದರೆ ಇದೀಗ ಈ ಘಟನೆಗೆ ಸಂಬಂಧಪಟ್ಟ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು, ಅದರಲ್ಲಿ ಹೊಸಕೆರೆ ಹಳ್ಳಿಯಲ್ಲಿ ಇರುವ ಮನೆಗೆ  ಏಕಾಏಕಿ  ನುಗ್ಗಿದ್ದ ನಾಗರತ್ನ,  ಮನೆಯಲ್ಲಿ ಕುಳಿತಿದ್ದ ಕೀರ್ತಿಗೌಡ ಮೇಲೆ ಚಪ್ಪಲಿಯಿಂದ  ಹಲ್ಲೆ ನಡೆಸಿದ್ದಾರೆ. ನಂತರ ಪೊಲೀಸ್ ಠಾಣೆಗೆ ಬಂದು ಕೀರ್ತಿಗೌಡ ವಿರುದ್ಧ  ಸುಳ್ಳು ಆರೋಪ ಮಾಡಿ ದೂರು ದಾಖಲಿಸಿದ್ದಾರೆ ಎಂಬ ಸ್ಪೋಟಕ ಮಾಹಿತಿ ಸಿಸಿಟಿವಿ ದೃಶ್ಯಾವಳಿಯಿಂದ  ಬಹಿರಂಗವಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments