Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಮಗ ಎಂದು ಜನ ಸಿನಿಮಾ ನೋಡಲ್ಲ: ನಿಖಿಲ್ ಕುಮಾರಸ್ವಾಮಿ ಖಡಕ್ ಮಾತು

ಮುಖ್ಯಮಂತ್ರಿ ಮಗ ಎಂದು ಜನ ಸಿನಿಮಾ ನೋಡಲ್ಲ:  ನಿಖಿಲ್ ಕುಮಾರಸ್ವಾಮಿ ಖಡಕ್ ಮಾತು
ಬೆಂಗಳೂರು , ಶುಕ್ರವಾರ, 25 ಜನವರಿ 2019 (10:09 IST)
ಬೆಂಗಳೂರು: ಸೀತಾರಾಮ ಕಲ್ಯಾಣ ಸಿನಿಮಾ ಬಿಡುಗಡೆಗೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಗೌಡ ಸಿನಿಮಾದಲ್ಲಿ ರಾಜಕೀಯ ಬೆರೆಸಬೇಡಿ ಎಂದಿದ್ದಾರೆ.


ನಾನು ಮುಖ್ಯಮಂತ್ರಿ ಮಗ ಎಂಬ ಕಾರಣಕ್ಕೆ ಸಿನಿಮಾ ಮಾಡಿಲ್ಲ. ನಾವೆಲ್ಲರೂ ಒಂದು ತಂಡವಾಗಿ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ. ಸಿನಿಮಾವೇ ಬೇರೆ, ರಾಜಕೀಯನೇ ಬೇರೆ. ನಾನು ನಮ್ಮ ಪಕ್ಷದವರಿಗೆ ಮಾತ್ರ ಸಿನಿಮಾ ಮಾಡಿಲ್ಲ. ಸಿನಿಮಾ ಎನ್ನುವುದು ಯೂನಿವರ್ಸಲ್ ಎಂದು ಖಡಕ್ ಆಗಿ ಹೇಳಿದ್ದಾರೆ.

ಈ ನಡುವೆ ಮಂಡ್ಯ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ತಮ್ಮ ಮತ್ತು ಅಂಬರೀಶ್ ಪುತ್ರ ಅಭಿಷೇಕ್ ನಡುವೆ ಸ್ಪರ್ಧೆ ಇದೆ ಎಂಬ ಸುದ್ದಿಯಿದೆಯಲ್ಲಾ ಎಂಬ ಪತ್ರಕರ್ತ ಪ್ರಶ್ನೆಗೆ ನಕ್ಕ ನಿಖಿಲ್, ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಫ್ರೆಂಡ್ಸ್ ಆಗಿಯೇ ಇದ್ದೇವೆ. ಈ ಬಗ್ಗೆ ಫೋನ್ ನಲ್ಲಿ ಮಾತನಾಡುವಾಗ ತಮಾಷೆ ಮಾಡುತ್ತಿರುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಫೋಟೋಗಳು ಲೀಕ್ ಆಗಿದ್ದಕ್ಕೆ ಕಾರಣ ಬಹಿರಂಗಪಡಿಸಿದ ನಟಿ ಹಂಸಿಕಾ ಮೊಟ್ವಾನಿ