Webdunia - Bharat's app for daily news and videos

Install App

ಕಾಶಿ ಶಿವನ ಸನ್ನಿಧಾನದಲ್ಲಿ ಮಗನ ಮದುವೆ ಆಮಂತ್ರಣಕ್ಕೆ ಪೂಜೆ ಸಲ್ಲಿಸಿದ ನೀತಾ ಅಂಬಾನಿ

Sampriya
ಶುಕ್ರವಾರ, 28 ಜೂನ್ 2024 (14:56 IST)
Photo Courtesy X
ವಾರಣಾಸಿ: ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹದ ಮೊದಲ ಆಮಂತ್ರಣವನ್ನು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ, ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥಕ್ಕೆ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿದರು.  ಈ ಮೂಲಕ ಶಿವನಿಗೆ ಮೊದಲ ಮದುವೆಯ ಆಮಂತ್ರಣವನ್ನು ನೀಡಿದರು.

ಅನಂತ್ ಅಂಬಾನಿಯವರ ವಿವಾಹವು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿಷ್ಠಿತ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ.

ಸುಂದರವಾದ ಗುಲಾಬಿ ಬಣ್ಣದ ಸೀರೆಯನ್ನು ಧರಿಸಿರುವ ನೀತಾ ಅಂಬಾನಿ ಗಂಗಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ತಮ್ಮ ಭೇಟಿಯ ಉದ್ದೇಶದ ಬಗ್ಗೆ ಮಾತನಾಡಿದರು

"ನಾನು ಶಿವನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಅನಂತ್ ಮತ್ತು ರಾಧಿಕಾ ಅವರ ಮದುವೆಯ ಆಮಂತ್ರಣದೊಂದಿಗೆ ಇಲ್ಲಿಗೆ ಬಂದಿದ್ದೇನೆ, ಅದನ್ನು ಸರ್ವೇಶ್ವರನಿಗೆ ಅರ್ಪಿಸುತ್ತೇನೆ. 10 ವರ್ಷಗಳ ನಂತರ ನಾನು ಇಲ್ಲಿಗೆ ಬಂದಿದ್ದೇನೆ. ನೋಡಿ ನನಗೆ ಸಂತೋಷವಾಗಿದೆ. ಇಲ್ಲಿನ ಅಭಿವೃದ್ಧಿ."
10 ವರ್ಷಗಳ ನಂತರ ದೇವಾಲಯಕ್ಕೆ ಭೇಟಿ ನೀಡಿದ ನಂತರ, ನೀತಾ ಅಂಬಾನಿ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು.

"ಗಂಗಾ ಆರತಿ ಸಮಯದಲ್ಲಿ ನಾನು ಇಲ್ಲಿಗೆ ಬಂದಿರುವುದು ನನ್ನ ಅದೃಷ್ಟ. ತುಂಬಾ ಚೆನ್ನಾಗಿದೆ ... ಇಲ್ಲಿ ತುಂಬಾ 'ಶಕ್ತಿ' ಇದೆ.
ದೇವಾಲಯದ ಭೇಟಿಯ ನಂತರ, ನೀತಾ ಅಂಬಾನಿ ಚಾಟ್ ಅಂಗಡಿಗೆ ಭೇಟಿ ನೀಡಿದರು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments