ವಿಚ್ಛೇದನದ ಬೆನ್ನಲ್ಲೇ ಇಂದು ಸುದ್ದಿಗೋಷ್ಠಿ ಕರೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ

Krishnaveni K
ಸೋಮವಾರ, 10 ಜೂನ್ 2024 (12:02 IST)
ಬೆಂಗಳೂರು: ಬಿಗ್ ಬಾಸ್ ನಿಂದ ಪರಿಚಯವಾಗಿ ಮದುವೆಯಾಗಿ ಇದೀಗ ವಿಚ್ಛೇದನ ನೀಡಿ ಎಲ್ಲರಿಗೂ ಶಾಕ್ ಕೊಟ್ಟಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ವಿಚ್ಛೇದನದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ, ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಬಗ್ಗೆ ಹಲವು ಊಹಾಪೋಹಗಳು ಹಬ್ಬಿವೆ. ನಿವೇದಿತಾ ಮಗು ಬೇಡ ಎಂದಿದ್ದಕ್ಕೆ ವಿಚ್ಛೇದನವಾಗಿದೆ. ನಿವೇದಿತಾಗೆ ತೆಲುಗಿನಲ್ಲಿ ಅವಕಾಶ ಬಂದಿದ್ದಕ್ಕೆ ದೂರವಾಗಿದ್ದರೆ ಎಂಬಿತ್ಯಾಗಿ ಹಲವು ಊಹಾಪೋಹಗಳಿವೆ.

ಅವರ ಲಾಯರ್ ಕಡೆಯಿಂದಲೂ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ಇಬ್ಬರೂ ಪರಸ್ಪರ ಹೊಂದಾಣಿಕೆಯಾಗದ ಸ್ಥಿತಿ ಇದ್ದ ಕಾರಣ ದೂರವಾಗಿದ್ದಾರೆ ಎಂದಿದ್ದರು. ಆದರೂ ಇಬ್ಬರ ವಿಚ್ಛೇದನದ ಬಗ್ಗೆ ದಿನಕ್ಕೊಂದು ಸುದ್ದಿಗಳು ಹಬ್ಬುತ್ತಲೇ ಇತ್ತು. ಇದೀಗ ಇಬ್ಬರೂ ಎಲ್ಲದಕ್ಕೂ ತೆರೆ ಎಳೆಯಲು ತೀರ್ಮಾನಿಸಿದ್ದಾರೆ.

ಇಂದು ಅಪರಾಹ್ನ 3.30 ಕ್ಕೆ ಜಿಟಿ ಮಾಲ್ ನಲ್ಲಿ ಚಂದನ್ ಮತ್ತು ನಿವೇದಿತಾ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ತಮ್ಮ ವಿಚ್ಛೇದನದ ಕಾರಣಗಳ ಬಗ್ಗೆ ಹರಡಿರುವ ಎಲ್ಲಾ ಸುದ್ದಿಗಳಿಗೆ ಅವರೀಗ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ಮುಂದಿನ ಸುದ್ದಿ
Show comments