Webdunia - Bharat's app for daily news and videos

Install App

ಮತ್ತೆ ದಿಲೀಪ್ ಗೆ ಜಾಮೀನಿಲ್ಲ! ಸಹೋದರನ ಹೇಳಿಕೆಯೇ ಮುಳುವಾಯಿತೇ?!

Webdunia
ಶುಕ್ರವಾರ, 14 ಜುಲೈ 2017 (11:30 IST)
ಕೊಚ್ಚಿ: ಬಹುಭಾಷಾ ತಾರೆಯ  ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದಿಲೀಪ್ ಗೆ ಮತ್ತೊಮ್ಮೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, ಇನ್ನೂ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.


ಇನ್ನೂ ಪ್ರಕರಣಕ್ಕೆ ಮುಖ್ಯವಾದ ಸಾಕ್ಷಿಯಾಗಿರುವ ಮೊಬೈಲ್ ಫೋನ್, ಹಾಗೂ ಇನ್ನಿತರ ಸಾಕ್ಷಿಗಳನ್ನು ಪತ್ತೆ ಮಾಡಲು ಪೊಲೀಸರಿಗೆ ಸಾಧ್ಯವಾಗಿಲ್ಲ. ದಿಲೀಪ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆಂಬ ಆರೋಪಗಳನ್ನು ಸಾಬೀತುಪಡಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ. ಹಾಗಿದ್ದರೂ ದಿಲೀಪ್ ಗೆ ಜಾಮೀನು ನಿರಾಕರಿಸಿದ್ದರ ಹಿಂದೆ ಅವರ ಸಹೋದರ ಅನೂಪ್ ನಿನ್ನೆಯಷ್ಟೇ ನೀಡಿದ್ದ ಒಂದು ಹೇಳಿಕೆ ಕಾರಣವಾಯಿತೇ ಎಂಬ ಸಂಶಯಗಳು ಮೂಡಿವೆ.

ಅನೂಪ್ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ‘ನನ್ನ ಸಹೋದರ ಒಮ್ಮೆ ಹೊರಗೆ ಬರಲಿ. ನಂತರ ಏನು ಮಾಡಬೇಕೋ ಮಾಡುತ್ತೇವೆ’ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದು ಅವರಿಗೆ ಮುಳುವಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾಕ್ಷಿಗಳ ನಾಶಕ್ಕೆ ದಿಲೀಪ್ ಮುಂದಾಗಬಹುದು ಎಂದು ನ್ಯಾಯಾಲಯ ಲೆಕ್ಕಾಚಾರ ಹಾಕಿರಬಹುದು ಎಂದು ಅಂದಾಜಿಸಲಾಗಿದೆ.

ನಟನ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಧೀಶರು ‘ಒಂದು ವೇಳೆ ಜಾಮೀನು ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ’ ಎಂದಿದ್ದಾರೆ. ಜಾಮೀನು ನಿರಾಕರಣೆಯಾದ ಹಿನ್ನಲೆಯಲ್ಲಿ ದಿಲೀಪ್ ಇನ್ನೂ ಒಂದು ದಿನ ಪೊಲೀಸ್ ಸುಪರ್ದಿಯಲ್ಲಿರಬೇಕಾಗುತ್ತದೆ. ದಿಲೀಪ್ ಹೊರ ಬರುತ್ತಿದ್ದಂತೆ ಮಾಧ್ಯಮಗಳು ಅವರ ಹೇಳಿಕೆ ಪಡೆಯಲು ಯತ್ನಿಸಿದರೂ ಅವರು ಯಾವುದೇ ಹೇಳಿಕೆ ನೀಡಲಿಲ್ಲ.

ಇದನ್ನೂ ಓದಿ.. ಇನ್ನೊಬ್ಬ ಚಾಮುಂಡೇಶ್ವರಿ ಮೆಟ್ಟಿಲು ಹತ್ತಿದ ಶೋಭಾ ಕರಂದ್ಲಾಜೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ