ಮತ್ತೆ ದಿಲೀಪ್ ಗೆ ಜಾಮೀನಿಲ್ಲ! ಸಹೋದರನ ಹೇಳಿಕೆಯೇ ಮುಳುವಾಯಿತೇ?!

Webdunia
ಶುಕ್ರವಾರ, 14 ಜುಲೈ 2017 (11:30 IST)
ಕೊಚ್ಚಿ: ಬಹುಭಾಷಾ ತಾರೆಯ  ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದಿಲೀಪ್ ಗೆ ಮತ್ತೊಮ್ಮೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, ಇನ್ನೂ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.


ಇನ್ನೂ ಪ್ರಕರಣಕ್ಕೆ ಮುಖ್ಯವಾದ ಸಾಕ್ಷಿಯಾಗಿರುವ ಮೊಬೈಲ್ ಫೋನ್, ಹಾಗೂ ಇನ್ನಿತರ ಸಾಕ್ಷಿಗಳನ್ನು ಪತ್ತೆ ಮಾಡಲು ಪೊಲೀಸರಿಗೆ ಸಾಧ್ಯವಾಗಿಲ್ಲ. ದಿಲೀಪ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆಂಬ ಆರೋಪಗಳನ್ನು ಸಾಬೀತುಪಡಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ. ಹಾಗಿದ್ದರೂ ದಿಲೀಪ್ ಗೆ ಜಾಮೀನು ನಿರಾಕರಿಸಿದ್ದರ ಹಿಂದೆ ಅವರ ಸಹೋದರ ಅನೂಪ್ ನಿನ್ನೆಯಷ್ಟೇ ನೀಡಿದ್ದ ಒಂದು ಹೇಳಿಕೆ ಕಾರಣವಾಯಿತೇ ಎಂಬ ಸಂಶಯಗಳು ಮೂಡಿವೆ.

ಅನೂಪ್ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ‘ನನ್ನ ಸಹೋದರ ಒಮ್ಮೆ ಹೊರಗೆ ಬರಲಿ. ನಂತರ ಏನು ಮಾಡಬೇಕೋ ಮಾಡುತ್ತೇವೆ’ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದು ಅವರಿಗೆ ಮುಳುವಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾಕ್ಷಿಗಳ ನಾಶಕ್ಕೆ ದಿಲೀಪ್ ಮುಂದಾಗಬಹುದು ಎಂದು ನ್ಯಾಯಾಲಯ ಲೆಕ್ಕಾಚಾರ ಹಾಕಿರಬಹುದು ಎಂದು ಅಂದಾಜಿಸಲಾಗಿದೆ.

ನಟನ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಧೀಶರು ‘ಒಂದು ವೇಳೆ ಜಾಮೀನು ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ’ ಎಂದಿದ್ದಾರೆ. ಜಾಮೀನು ನಿರಾಕರಣೆಯಾದ ಹಿನ್ನಲೆಯಲ್ಲಿ ದಿಲೀಪ್ ಇನ್ನೂ ಒಂದು ದಿನ ಪೊಲೀಸ್ ಸುಪರ್ದಿಯಲ್ಲಿರಬೇಕಾಗುತ್ತದೆ. ದಿಲೀಪ್ ಹೊರ ಬರುತ್ತಿದ್ದಂತೆ ಮಾಧ್ಯಮಗಳು ಅವರ ಹೇಳಿಕೆ ಪಡೆಯಲು ಯತ್ನಿಸಿದರೂ ಅವರು ಯಾವುದೇ ಹೇಳಿಕೆ ನೀಡಲಿಲ್ಲ.

ಇದನ್ನೂ ಓದಿ.. ಇನ್ನೊಬ್ಬ ಚಾಮುಂಡೇಶ್ವರಿ ಮೆಟ್ಟಿಲು ಹತ್ತಿದ ಶೋಭಾ ಕರಂದ್ಲಾಜೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ