Select Your Language

Notifications

webdunia
webdunia
webdunia
webdunia

ಸಂಕ್ರಾಂತಿಯನ್ನು ಕಡೆಗಣಿಸಿತೇ ಕನ್ನಡ ಚಿತ್ರರಂಗ?

Sandalwood

Krishnaveni K

ಬೆಂಗಳೂರು , ಭಾನುವಾರ, 14 ಜನವರಿ 2024 (13:20 IST)
ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಸಿನಿ ರಂಗವೂ ಬ್ಯುಸಿಯಾಗಿರುತ್ತದೆ. ಅದರಲ್ಲೂ ಸಂಕ್ರಾಂತಿ ಹಬ್ಬ ವೀಕೆಂಡ್ ಬಂದಿದೆಯೆಂದರೆ ಸಾಲು ಸಾಲು ಚಿತ್ರಗಳು ಬಿಡುಗಡೆಯಾಗಬೇಕಿತ್ತು.

ಆದರೆ ಈ ಬಾರಿ ಸಂಕ್ರಾಂತಿಗೆ ಕನ್ನಡ ಚಿತ್ರರಂಗ ತಣ್ಣಗೇ ಕುಳಿತಿದೆ. ಯಾವುದೇ ಸ್ಟಾರ್ ನಟರ ಸಿನಿಮಾಗಳೂ ಬಿಡುಗಡೆಯಾಗುತ್ತಿಲ್ಲ. ಹೊಸ ಘೋಷಣೆಗಳೂ ಇಲ್ಲ.

ವೀಕೆಂಡ್ ನಲ್ಲಿ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚು. ಆದರೆ ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾಗದೇ ಇರುವುದರಿಂದ ಕನ್ನಡ ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಆದರೆ ಪರಭಾಷೆಯ ಸಾಲು ಸಾಲು ಸಿನಿಮಾಗಳು ಈ ಸಂಕ್ರಾಂತಿಗೆ ಬಿಡುಗಡೆಯಾಗುತ್ತಿದೆ.

ನಾ ಸಾಮಿ ರಂಗ, ಕ್ಯಾಪ್ಟನ್ ಮಿಲ್ಲರ್ ಸೇರಿದಂತೆ ಹಲವು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಹೀಗಾಗಿ ಈ ಸಂಕ್ರಾಂತಿಗೆ ಕರ್ನಾಟಕದಲ್ಲಿ ಪರಭಾಷಾ ಸಿನಿಮಾಗಳದ್ದೇ ಅಬ್ಬರ ಖಂಡಿತಾ.

Share this Story:

Follow Webdunia kannada

ಮುಂದಿನ ಸುದ್ದಿ

ಬಾವನ ಜೊತೆ ಪುಟ್ಟಕ್ಕನ ಮಕ್ಕಳು ಖ್ಯಾತಿಯ ಸ್ನೇಹ ಡ್ಯುಯೆಟ್