Webdunia - Bharat's app for daily news and videos

Install App

ಹೆಣ್ಣು ಮಕ್ಕಳನ್ನು ಗೌರವಿಸದವರು ರಾಕ್ಷಸರು: ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 26 ಆಗಸ್ಟ್ 2021 (11:22 IST)
ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ನಟ ಜಗ್ಗೇಶ್, 'ಹೆಣ್ಣು ಮಕ್ಕಳನ್ನು ಗೌರವಿಸದವರು ರಾಕ್ಷಸರು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಎಂಥ ಕ್ರೂರಿಗಳು... ತಾಯಿ ಹೆಣ್ಣಲ್ಲವೆ?, ಅಕ್ಕತಂಗಿ ಹೆಣ್ಣಲ್ಲವೆ?, ಮಡದಿ ಹೆಣ್ಣಲ್ಲವೆ?, ಹೆಣ್ಣು ಗೌರವಿಸದವರು ರಾಕ್ಷಸರು. ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ' ಎಂದು ಬರೆದುಕೊಂಡಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಐದು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯ ಬುಧವಾರ ಗೊತ್ತಾಗಿತ್ತು.
ಆಕೆಯೊಂದಿಗೆ ಇದ್ದ ಸ್ನೇಹಿತನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ಹೀಗಾಗಿ ಇಬ್ಬರೂ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಹೊರರಾಜ್ಯದಿಂದ ಬಂದ ಕಾರ್ಮಿಕರೆಂದು ಪೊಲೀಸರು ಶಂಕಿಸಿದ್ದು, ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments