Webdunia - Bharat's app for daily news and videos

Install App

ನಿಮ್ಮ ಪ್ರೀತಿ, ಹಾರೈಕೆ ಇರುವವರೆಗೂ ಡಿಬಾಸ್‌ಗೆ ಏನೂ ಆಗಲ್ಲ: ದಿನಕರ್ ತೂಗುದೀಪ

Sampriya
ಶನಿವಾರ, 5 ಅಕ್ಟೋಬರ್ 2024 (17:25 IST)
Photo Courtesy X
ತುಮಕೂರು: ಇಂದು ತುಮಕೂರಿನಲ್ಲಿ ನಡೆದ ರಾಯಲ್ ಸಿನಿಮಾದ ಕಾರ್ಯಕ್ರಮದಲ್ಲಿ ನಿರ್ದೇಶಕ ದಿನಕರ್ ತೂಗುದೀಪ ವೇದಿಕೆ ಹತ್ತಿದ್ದ ಹಾಗೇ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಸಿನಿಮಾ ಬಗ್ಗೆ ಮಾತನಾಡಲು ಶುರುಮಾಡಿದಾಗ, ದರ್ಶನ್ ಪರ ಘೋಷಣೆ ಜೋರಾಗಿ ಕೂಗಿದ್ದಾರೆ.

ಕೊನೆಗೂ ಮೌನ ಮುರಿದ ದಿನಕರ್, ನಿಮ್ಮ ಪ್ರೀತಿ, ಹಾರೈಕೆ ಇರುವವರೆಗೂ ನಿಮ್ಮ ಬಾಸ್‌ಗೆ ಏನೂ ಆಗಲ್ಲ ಎಂದು ಧೈರ್ಯ ತುಂಬಿದ್ದಾರೆ.

ರಾಯಲ್ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ದಿನಕರ್ ತೂಗುದೀಪ್ ಭಾಗಿಯಾಗಿದ್ದರು. ದಿನಕರ್ ವರು ಸಿನಿಮಾ ಬಗ್ಗೆ ಮಾತನಾಡುತ್ತಿದ್ದ ಹಾಗೇ, ಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಡಿಬಾಸ್ ಎಂದು ಕೂಗಿದ್ದಾರೆ. ಇದನ್ನು ಕೇಳಿದ ದಿನಕರ್ ನಿಮ್ಮ ಪ್ರೀತಿ ಅಭಿಮಾನ ಪ್ರೋತ್ಸಾಗ ಇರುವವರೆಗೂ ಡಿಬಾಸ್ ಅವರನ್ನು ಯಾವನು ಏನು ಮಾಡಕ್ಕೆ ಆಗಲ್ಲ. ನಿಮ್ಮ ಪ್ರೀತಿ ದರ್ಶನ್, ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ಹೀಗಾ ಸದಾ ಇರಲಿ ಎಂದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರುತ್ತಿದ್ದ ಹಾಗೇ ಅತ್ತಿಗೆ ವಿಜಯಲಲಕ್ಷ್ಮಿ ಜತೆ ದಿನಕರ್ ತೂಗುದೀಪ್ ಕಾನೂನು ಹೋರಾಟದ ಜತೆ ದೇವರ ಮೊರೆ ಹೋಗುತ್ತಿದ್ದಾರೆ. ಅದಲ್ಲದೆ ಅತ್ತಿಗೆ ಜತೆ ಆಗಾಗ ದರ್ಶನ್‌ರನ್ನು ಭೇಟಿಯಾಗಿ ಧೈರ್ಯ ತುಂಬುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments