Select Your Language

Notifications

webdunia
webdunia
webdunia
webdunia

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ನಟ ದರ್ಶನ್ ತೂಗುದೀಪ್ ಅಭಿಮಾನಿಗಳು

Sampriya

ಬೆಂಗಳೂರು , ಸೋಮವಾರ, 28 ಜುಲೈ 2025 (16:01 IST)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣ ಸಂಬಂಧ ನಟ ದರ್ಶನ್ ಫ್ಯಾನ್ಸ್ ಹಾಗೂ ನಟಿ ರಮ್ಯಾ ನಡುವೆ ಪೋಸ್ಟ್ ವಾರ ಜೋರಾಗಿದೆ. ರೇಣುಕಾಸ್ವಾಮಿ ಕುಟುಂಬದ ಪರ ನಿಂತು ರಮ್ಯಾ ವಿರುದ್ಧ ದರ್ಶನ್ ಫ್ಯಾನ್ಸ್ ಕೋಪಗೊಂಡಿದ್ದಾರೆ. ಹಾಗಾಗಿ ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ ದರ್ಶನ್ ಅಭಿಮಾನಿಗಳು. 

ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಳುಹಿಸುತ್ತಿರುವ ಅಶ್ಲೀಲ ಮೆಸೇಜ್‌ಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ರಮ್ಯಾ ಪೋಸ್ಟ್ ಕೂಡ ಮಾಡಿದ್ದಾರೆ. ಇದೀಗ ಕೆಟ್ಟದಾಗಿ ಕಮೆಂಟ್ ಮಾಡುತ್ತಿರುವ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿಲು ರಮ್ಯಾ ತಯಾರಿ ನಡೆಸುತ್ತಿದ್ದಾರೆ. 

ಈ ಬೆಳವಣಿಗೆ ಸಂಬಂಧ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್‌, ನಟಿ ದೂರು ಕೊಟ್ಟರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲದೇ ನಮ್ಮಲ್ಲಿ ಕೆಲವು ಪ್ರಕರಣದಲ್ಲಿ ಸ್ವಯಂಪ್ರೇರಿತ ತಗೋತಾರೆ. ಆಥರ ಏನಾದ್ರೂ ಅವಕಾಶ ಇದ್ರೆ ಪೊಲೀಸರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರ. 


Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ