Webdunia - Bharat's app for daily news and videos

Install App

ದರ್ಶನ್ ಬಿಡುಗಡೆಯಾಗ್ತಾರೆಂದು ಭಯ ಬಿದ್ದಿದ್ದಾರಂತೆ ಪ್ರಥಮ್: ಮಾಡಿದ್ದೇನು ನೋಡಿ

Krishnaveni K
ಸೋಮವಾರ, 14 ಅಕ್ಟೋಬರ್ 2024 (14:26 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಇಂದು ತೀರ್ಪು ಹೊರಬೀಳಲಿದೆ. ಅದಕ್ಕೆ ಮೊದಲು ನಟ, ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮಾಡಿರುವ ಪೋಸ್ಟ್ ಎಲ್ಲರ ಗಮನ ಸೆಳೆಯುತ್ತಿದೆ.

ಈ ಹಿಂದೆ ದರ್ಶನ್ ಅರೆಸ್ಟ್ ಆದ ಸಂದರ್ಭದಲ್ಲಿ ದರ್ಶನ್ ರನ್ನು ಬೆಂಬಲಿಸುವವರ ಬಗ್ಗೆ ಪ್ರಥಮ್ ಇನ್ನಿಲ್ಲದಂತೆ ಟೀಕಿಸಿದ್ದರು. ರೇಣುಕಾಸ್ವಾಮಿ ಕುಟುಂಬಸ್ಥರನ್ನೂ ಭೇಟಿಯಾಗಿ ಬಂದಿದ್ದರು. ತೀರಾ ಇತ್ತೀಚೆಗೆ ನಟ ದರ್ಶನ್ ನಾಯಕರಾಗಿರುವ ಡೆವಿಲ್ ಸಿನಿಮಾ ಎದುರಿಗೇ ನನ್ನ ಸಿನಿಮಾ ಬಿಡುಗಡೆ ಮಾಡ್ತೀನಿ ಎಂದು ಸವಾಲು ಹಾಕಿದ್ದರು.

ಆದರೆ ಈಗ ದರ್ಶನ್ ಜಾಮೀನಿನ ಮೇಲೆ ಹೊರಬರುವ ವಿಶ್ವಾಸದಲ್ಲಿದ್ದಾರೆ ಎಂಬ ವರದಿಗಳು ಬರುತ್ತಿದ್ದಂತೇ  ಪ್ರಥಮ್ ಪ್ಲೇಟ್ ಬದಲಾಯಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಶೀಘ್ರದಲ್ಲೇ ದರ್ಶನ್ ಬಿಡುಗಡೆಯಾಗಲೆಂದು ಈಶ್ವರನಲ್ಲಿ ಪ್ರಾರ್ಥನೆ ಮಾಡುವುದಾಗಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದು, ಪ್ರಥಮ್ ರ ಕಾಲೆಳೆದಿದ್ದಾರೆ. ಡಿ ಬಾಸ್ ಬಿಡುಗಡೆಯಾದರೆ ಉಳಿಗಾಲವಿಲ್ಲ ಎಂದು ಈಗ ಭಯ ಬಿದ್ದು ಈ ರೀತಿ ಕಾಮೆಂಟ್ ಮಾಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ. ನೀವು ಏನೇ ಪೋಸ್ಟ್ ಹಾಕಿದ್ದರೂ ನಿಮಗೆ ನಮ್ಮ ಬೆಂಬಲವಿಲ್ಲ ಎಂದು ದರ್ಶನ್ ಫ್ಯಾನ್ಸ್ ಕಿಡಿ ಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments