Webdunia - Bharat's app for daily news and videos

Install App

ಮಧ್ಯಂತರ ಜಾಮೀನು ಮುಗಿಯುವ ಕೊನೇ ಕ್ಷಣದಲ್ಲಿ ದರ್ಶನ್ ಗೆ ಆಪರೇಷನ್

Sampriya
ಶನಿವಾರ, 30 ನವೆಂಬರ್ 2024 (17:13 IST)
ಬೆಂಗಳೂರು: ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಮುಗಿಯಲು ಒಂದು ವಾರ ಬಾಕಿಯಿರುವಾಗ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕೆಂದು ತಮ್ಮ ನಿರ್ಧಾರವನ್ನು ದಿಢೀರ್ ಬದಲಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬಳ್ಳಾರಿ ಜೈಲಿನಲ್ಲಿ ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕೆಂದು ಮಧ್ಯಂತರ ಜಾಮೀನು ಅಡಿಯಲ್ಲಿ ಬೆಂಗಳೂರಿಗೆ ಬಂದಿದ್ದರು. ಆದರೆ ಜಾಮೀನು ಸಿಕ್ಕಿ 5 ವಾರಗಳಾದರು ದರ್ಶನ್ ಇದುವರೆಗೆ ಶಸ್ತ್ರಚಿಕಿತ್ಸೆಗೆ ಮುಂದಾಗಿಲ್ಲ. ಇನ್ನೂ ಕೆಲವರು ದರ್ಶನ್ ಕಾಲಹರಣ ಮಾಡುತ್ತಿದ್ದಾರೆ. ಮಧ್ಯಂತರ ಜಾಮೀನು ಮುಗಿಯುವ ವೇಳೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದಾರೆಂಬ ಆರೋಪವು ವ್ಯಕ್ತವಾಗಿತ್ತು.

ಇನ್ನೂ ದರ್ಶನ್‌ಗೆ ಶಸ್ತ್ರಚಿಕಿತ್ಸೆ ಆಗದಿರಲು ಕಾರಣ ಅವರ ರಕ್ತದೊತ್ತಡ ಎನ್ನಲಾಗಿದೆ. ಬಿಪಿ ಕಂಟ್ರೋಲ್‌ಗೆ ಬಾರದೇ ಇರೋ ಕಾರಣದಿಂದಾಗಿ ಇನ್ನೂ ಸರ್ಜರಿ ಮಾಡಲಾಗಿಲ್ಲವಂತೆ. ಇದೀಗ ದರ್ಶನ್ ಸರ್ಜರಿಗೆ ಒಪ್ಪಿಗೆ ಸೂಚಿಸಿರುವುದು, ಈ ಹಿಂದೆಲ್ಲ ನೀಡಿದ ಕಾರಣ ಸುಳ್ಳು ಎಂಬ ಸಂಶಯವನ್ನು ಮೂಡಿಸಿದೆ.

ಈಗಾಗಲೇ ನುರಿತ ವೈದ್ಯರನ್ನೂ ದರ್ಶನ್ ಕುಟುಂಬ ಸಂಪರ್ಕ ಮಾಡಿದ್ದಾರಂತೆ. ಜಾಮೀನು ಅವಧಿ ಉಳಿದಿರೋದು ಕೇವಲ 11 ದಿನಗಳು ಮಾತ್ರ. ಅಷ್ಟರಲ್ಲಿ ಸರ್ಜರಿ ಕುರಿತು ಮಾನ್ಯ ನ್ಯಾಯಾಲಯಕ್ಕೆ ಮತ್ತೊಂದು ಮನವಿ ಸಲ್ಲಿಸಲಾಗತ್ತೆ ಅನ್ನೋದು ಸದ್ಯಕ್ಕಿರೋ ಮಾಹಿತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments