Webdunia - Bharat's app for daily news and videos

Install App

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

Sampriya
ಬುಧವಾರ, 7 ಮೇ 2025 (14:22 IST)
Photo Courtesy X
ಬೆಂಗಳೂರು: ಒಬ್ಬ ಭಾರತೀಯನಾಗಿ ಈ ಪವಿತ್ರ ಮಣ್ಣಿನ ಮಗನಾಗಿ, ಪೆಹಲ್ಗಾಮ್‌ನಲ್ಲಿ ನಡೆದ ಘಟನೆಯಿಂದ ನೋವು ಅನುಭವಿಸಿದೆ. ಇಂದು ನ್ಯಾಯ ಸಿಕ್ಕಿದೆ ಎಂದು ನಟ ಕಿಚ್ಚ ಸುದೀಪ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೆಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ಭಾರತೀಯ ಸೇನೆ ಕಳೆದ ರಾತ್ರಿ ಏರ್‌ಸ್ಟ್ರೈಕ್ ಮಾಡಿದೆ. ಈ ಹಿನ್ನೆಲೆ ಕಿಚ್ಚ ಸುದೀಪ್  ಭಾರತೀಯ ಸೇನೆ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕೇವಲ ಒಂದು ಧ್ಯೇಯವಲ್ಲ. ಇದು ಪವಿತ್ರ ಪ್ರತಿಜ್ಞೆ. ಉಗ್ರರು ದಾಳಿ ಮಾಡುವ ಮೂಲಕ ಭಾರತದ ಸಿಂಧೂರಕ್ಕೆ ಅಪಮಾನ ಮಾಡಲಾಗಿತ್ತು. ಆದರೆ ನಮ್ಮ ಧೈರ್ಯಶಾಲಿ ಸೈನಿಕರು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ನನ್ನ ವಂದನೆಗಳು ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಗೌರವಾನ್ವಿತ ಪ್ರಧಾನಿಗಳು ರಕ್ಷಣಾ ನಾಯಕತ್ವಕ್ಕೆ, ಎತ್ತರವಾಗಿ, ದೃಢವಾಗಿ ಮತ್ತು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಕಾರ್ಯಕ್ಕಾಗಿ ವಂದನೆಗಳು. ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ. ಜೈ ಹಿಂದ್ ಎಂದು ಅವರು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ಮುಂದಿನ ಸುದ್ದಿ
Show comments