Webdunia - Bharat's app for daily news and videos

Install App

ಜೈಲಿಗೆ ಹೋದರೂ ಪವಿತ್ರಾ ಗೌಡಗೆ ಬಿಡದ ‘ಡಿ’ ನಂಟು

Krishnaveni K
ಶನಿವಾರ, 22 ಜೂನ್ 2024 (10:37 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಜೈಲಿಗೆ ಹೋದರೂ ಅಲ್ಲೂ ‘ಡಿ’ ನಂಟು ಬಿಟ್ಟಿಲ್ಲ. ಪವಿತ್ರಾ ಗೌಡ ಮತ್ತು ಕೆಲವು ಆರೋಪಿಗಳನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. 10 ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡರನ್ನು ಈಗ ವಿಚಾರಣೆ ಮುಗಿದ ಹಿನ್ನಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳು ಇನ್ನೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಕಂಬಿ ಎಣಿಸುತ್ತಿದ್ದಾರೆ. ವಿಶೇಷವೆಂದರೆ ಜೈಲಿಗೆ ಹೋದರೂ ಅವರಿಗೆ ‘ಡಿ’ ನಂಟು ಬಿಟ್ಟಿಲ್ಲ. ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಗೌಡಗೆ ವಿಚಾರಾಧೀನ ಕೈದಿ ಸಂಖ್ಯೆ 6024 ನೀಡಲಾಗಿದೆ. ಇಲ್ಲಿ ಅವರನ್ನು ‘ಡಿ’ ಬ್ಲಾಕ್ ನಲ್ಲಿರಿಸಲಾಗಿದೆ.

ಡಿ ಗ್ಯಾಂಗ್ ಮಾಡಿದ ಅವಾಂತರದಿಂದ ರೇಣುಕಾಸ್ವಾಮಿ ಹತ್ಯೆಯಾಗಿ ಜೈಲು ಸೇರಿರುವ ಪವಿತ್ರಾಗೆ ಈಗ ಜೈಲು ಸೇರಿದರೂ ಡಿ ನಂಟು ಬಿಟ್ಟಿಲ್ಲ. ಐಷಾರಾಮಿ ಜೀವನಕ್ಕೆ ಒಗ್ಗಿ ಹೋಗಿರುವ ಪವಿತ್ರಾ ಈಗ ಜೈಲಿನಲ್ಲಿ ಸರಿಯಾಗಿ ಊಟವಿಲ್ಲದೇ ನಿದ್ರೆಯಿಲ್ಲದೇ ಕಾಲ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments