ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Krishnaveni K
ಮಂಗಳವಾರ, 2 ಸೆಪ್ಟಂಬರ್ 2025 (12:07 IST)

ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ರೆಗ್ಯುಲರ್ ಜಾಮೀನಿನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ಬಳಿಕ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳು ಮತ್ತೆ ಜೈಲು ಸೇರಿದ್ದರು. ಇದರ ನಡುವೆ ಪವಿತ್ರಾ ಗೌಡ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಆದರೆ ಈಗ 57 ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಶಾಕ್ ನೀಡಿದೆ. ಇದರಿಂದಾಗಿ ಪವಿತ್ರಾ ಮತ್ತೆ ಜೈಲಿನಲ್ಲಿಯೇ ಕಳೆಯಬೇಕಾಗಿದೆ. ಇನ್ನು ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ವಿಚಾರಣೆ ಮುಂದುವರಿದಿದೆ.

ಈಗಷ್ಟೇ ನ್ಯಾಯಾಧೀಶರು ವಿಚಾರಣೆ ಕೈಗೆತ್ತಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಇದರ ತೀರ್ಪು ಹೊರಬರುವ ಸಾಧ್ಯತೆಯಿದೆ. ಒಂದು ವೇಳೆ ಕೋರ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಆದೇಶ ನೀಡಿದರೆ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಡಾಲಿ ಧನಂಜಯ ಲಿಂಗಾಯತರಾಗಿದ್ದು ಮಾಂಸ ಸೇವಿಸಿದ್ದು ತಪ್ಪಾ

ಮುಂದಿನ ಸುದ್ದಿ
Show comments