Webdunia - Bharat's app for daily news and videos

Install App

ನನ್ನಮ್ಮ ಕೋಟಿಗೊಬ್ಬಳು: ಪವಿತ್ರಾ ಗೌಡ ಮಗಳು ಖುಷಿ ಗೌಡ ಮೆಸೇಜ್

Krishnaveni K
ಮಂಗಳವಾರ, 13 ಆಗಸ್ಟ್ 2024 (16:04 IST)
Photo Credit: Instagram
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡಗೆ ಮಗಳು ಖುಷಿ ಗೌಡ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಂದೇಶ ಬರೆದಿದ್ದಾಳೆ.

ಪವಿತ್ರಾ ಗೌಡ ಪುತ್ರಿ ಖುಷಿ ಗೌಡ ಅಮ್ಮ ಜೈಲು ಸೇರಿಕೊಂಡಾಗಿನಿಂದ ಅಮ್ಮನ ಬಗ್ಗೆ ಇದು ಎರಡನೇ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ನನ್ನ ಅಮ್ಮ ನನ್ನ ಸ್ಪೂರ್ತಿ. ಕಷ್ಟವನ್ನೂ ಹೇಗೆ ಎದುರಿಸುವುದೆಂದ ಹೇಳಿಕೊಟ್ಟಿದ್ದಾಳೆ ಎಂದು ಬರೆದುಕೊಂಡಿದ್ದಾಳೆ.

ಅಮ್ಮನ ಬಗ್ಗೆ ಖುಷಿ ಬರೆದ ಮೆಸೇಜ್ ಹೀಗಿದೆ. ‘ನನ್ನ ಅಮ್ಮ ನನ್ನ ಸ್ಪೂರ್ತಿ. ಏನೇ ಕಷ್ಟ ಬಂದರೂ ಹೇಗೆ ಗಟ್ಟಿಯಾಗಿ ನಿಲ್ಲಬೇಕು ಎಂದು ಅವಳು ಹೇಳಿಕೊಟ್ಟಿದ್ದಾಳೆ. ನನ್ನೊಂದಿಗೆ ಯಾವತ್ತೂ ಮುಕ್ತ ಮತ್ತು ಬೆಂಬಲವಾಗಿ ನಿಂತಿದ್ದಳು. ಆಕೆ ಕೋಟಿಗೊಬ್ಬಳು. ಅವಳಂತಹ ಇನ್ನೊಬ್ಬ ವ್ಯಕ್ತಿಯನ್ನು ನಾನು ನೋಡಿಲ್ಲ. ಅವಳಂತಹ ಅಮ್ಮನ ಪಡೆಯಲು ನಾನು ಅದೃಷ್ಟ ಮಾಡಿದ್ದೇನೆ’ ಎಂದು ಖುಷಿ ಬರೆದುಕೊಂಡಿದ್ದಾಳೆ.

ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಖುಷಿ ಗೌಡ ಆಗಾಗ ತನ್ನ ಅಜ್ಜಿ ಜೊತೆ ಜೈಲಿಗೆ ಬಂದು ಅಮ್ಮನನ್ನು ಭೇಟಿ ಮಾಡಿಕೊಂಡು ಹೋಗಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲೂ ತನ್ನ ಅಮ್ಮನ ರೆಡ್ ಕಾರ್ಪೆಟ್ ಸ್ಟುಡಿಯೋ ಉತ್ಪನ್ನಗಳ ಪ್ರಚಾರ ಮಾಡುತ್ತಾ ಅಮ್ಮನ ಜವಾಬ್ಧಾರಿಯನ್ನು ನಿಭಾಯಿಸುತ್ತಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments