Webdunia - Bharat's app for daily news and videos

Install App

ದರ್ಶನ್ ಹುಟ್ಟುಹಬ್ಬ ದಿನವೇ ಪವಿತ್ರಾ ಗೌಡಗೆ ನಿರಾಸೆ

Krishnaveni K
ಸೋಮವಾರ, 16 ಫೆಬ್ರವರಿ 2026 (16:23 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಇಂದು ದರ್ಶನ್ ಹುಟ್ಟುಹಬ್ಬದ ದಿನವೇ ನಿರಾಸೆಯಾಗಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿ. ಸದ್ಯಕ್ಕೆ ಇಬ್ಬರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇಂದು ದರ್ಶನ್ ಹುಟ್ಟುಹಬ್ಬ. ತಮ್ಮ ಹುಟ್ಟುಹಬ್ಬವನ್ನು ಅವರು ಜೈಲಿನಲ್ಲಿಯೇ ಆಚರಿಸುವಂತಾಗಿದೆ.

ಇದರ ನಡುವೆ ಪವಿತ್ರಾ ಗೌಡಗೂ ಇಂದು ಕೋರ್ಟ ಬಿಗ್ ಶಾಕ್ ಕೊಟ್ಟಿದೆ. ಮಧ್ಯಂತರ ಜಾಮೀನಿಗಾಗಿ ಪವಿತ್ರಾ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಕೋರ್ಟ್ ತಳ್ಳಿ ಹಾಕಿದೆ. ಮಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ಜೊತೆಗಿರಲು ಜಾಮೀನು ನೀಡಿ ಎಂದು ಪವಿತ್ರಾ ಕೋರ್ಟ್ ಮೊರೆ ಹೋಗಿದ್ದರು.

ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಪವಿತ್ರಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ಪವಿತ್ರಾಗೆ ನಿರಾಸೆಯಾಗಿದೆ. ಸದ್ಯಕ್ಕೆ ಆಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಶಿಕ್ಷೆ ಮುಂದುವರಿಸಬೇಕಿದೆ. ಇದೀಗ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಶುರುವಾಗಿ ಟೆನ್ಷನ್: ಆಪ್ತರೇ ಹೀಗೆ ಮಾಡಿದರಲ್ಲಾ...

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಮುಂದಿನ ಸುದ್ದಿ
Show comments