Webdunia - Bharat's app for daily news and videos

Install App

ಮರ್ಡರ್ ಕೇಸ್ ಇದ್ದರೇನು, ಡೆಲ್ಲಿ, ಮುಂಬೈಗೆ ಹೋಗಲಿರುವ ಪವಿತ್ರಾ ಗೌಡ

Krishnaveni K
ಬುಧವಾರ, 26 ಫೆಬ್ರವರಿ 2025 (09:41 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಈಗ ಮುಂಬೈ, ಡೆಲ್ಲಿ ಸುತ್ತಾಡಲಿದ್ದಾರೆ. ಇದಕ್ಕೆ ಈಗಾಗಲೇ ಕೋರ್ಟ್ ಅನುಮತಿಯನ್ನೂ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಹಲವು ದಿನ ಜೈಲುವಾಸ ಅನುಭವಿಸಿದ್ದರು. ಇದಾದ ಬಳಿಕ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿ ಹೊರಗಡೆ ಬಂದಿದ್ದರು. ಹಾಗಿದ್ದರೂ ಎಲ್ಲರೂ ತಿಂಗಳಿಗೊಮ್ಮೆ ಕೋರ್ಟ್ ಗೆ ಹಾಜರಾಗಲೇ ಬೇಕು.

ಪವಿತ್ರಾ ಗೌಡ ಈಗಾಗಲೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರೆಡ್ ಕಾರ್ಪ್ ಸ್ಟುಡಿಯೋವನ್ನು ರಿ ಲಾಂಚ್ ಮಾಡಿದ್ದರು. ಇದೀಗ ಆ ಸ್ಟುಡಿಯೋ ಕೆಲಸಗಳಿಗಾಗಿ ತಮಗೆ ಡೆಲ್ಲಿ, ಮುಂಬೈ ಎಂದು ಹೋಗಬೇಕಾಗಿದೆ. ಇದಕ್ಕೆ ಅನುಮತಿ ಕೊಡಿ ಎಂದು ಕೋರ್ಟ್ ಮೊರೆ ಹೋಗಿದ್ದಾರೆ.

ನಿನ್ನೆ ಕೋರ್ಟ್ ಗೆ ಹಾಜರಾಗಿದ್ದ  ವೇಳೆ ಕೋರ್ಟ್ ಮುಂದೆ ತಮ್ಮ ಕೆಲಸಕ್ಕಾಗಿ ಪರರಾಜ್ಯಕ್ಕೆ ಹೋಗಲು ಅನುಮತಿ ಕೇಳಿದ್ದು ಇದಕ್ಕೆ ಕೋರ್ಟ್ ಕೂಡಾ ಅನುಮತಿ ನೀಡಿದೆ. ಮಾರ್ಚ್ 3 ರಿಂದ ಮಾರ್ಚ್ 10 ರವರೆಗೆ, ಮಾರ್ಚ್ 17 ರಿಂದ ಮಾರ್ಚ್ 26 ರವರೆಗೆ ತೆರಳಲು ಅನುಮತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments