Webdunia - Bharat's app for daily news and videos

Install App

ರೀಲ್ಸ್ ಪೋಸ್ಟ್ ಮಾಡಿದ ಪವಿತ್ರಾ ಗೌಡ ರಿಲೀಸ್: ಕಾಮೆಂಟ್ ಮಾಡುವಾಗ ಹುಷಾರಪ್ಪೋ

Krishnaveni K
ಶನಿವಾರ, 25 ಜನವರಿ 2025 (10:21 IST)
Photo Credit: Instagram
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ರೆಗ್ಯುಲರ್ ಜಾಮೀನು ಪಡೆದು ಹೊರಬಂದಿರುವ ಪವಿತ್ರಾ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಮೊದಲ ರೀಲ್ಸ್ ಪೋಸ್ಟ್ ಮಾಡಿದ್ದಾರೆ. ಆದರೆ ಈ ಪೋಸ್ಟ್ ನೋಡಿ ನೆಟ್ಟಿಗರು ಹುಷಾರಾಗಿ ಕಾಮೆಂಟ್ ಮಾಡ್ರಪ್ಪಾ ಎಂದು ಟ್ರೋಲ್ ಮಾಡಿದ್ದಾರೆ.

ಪವಿತ್ರಾ ಗೌಡ ಜೈಲಿನಿಂದ ರಿಲೀಸ್ ಆದ ಮೇಲೆ ಕೆಲವು ದಿನ ಮನೆಯಲ್ಲಿಯೇ ಇದ್ದರು. ಇದೀಗ ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಿರಡಿಗೆ ಭೇಟಿ ನೀಡಿರುವ ಪವಿತ್ರಾ ಗೌಡ ರೀಲ್ಸ್ ಒಂದನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ.

ಇದರಲ್ಲಿ ಅನೇಕರು ಪವಿತ್ರಾ ಕಾಲೆಳೆದಿದ್ದೇ ಹೆಚ್ಚು. ನೋಡ್ಕೊಂಡು ಕಾಮೆಂಟ್ ಮಾಡ್ರಪ್ಪೋ. ಆಮೇಲೆ ಗೊತ್ತಲ್ಲ ಏನಾಗುತ್ತೋ ಅಂತ. ಗಾಡಿ ಓನರ್ ಸರಿ ಇದ್ರೂ ಓಡಿಸೋರು ಸರಿ ಇಲ್ಲ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ನಾನೇನು ಕಾಮೆಂಟ್ ಮಾಡಲ್ಲಪ್ಪಾ ಆಮೇಲೆ ಎತ್ತಾಕೊಂಡು ಶೆಡ್ ಗೆ ಹೋಗ್ತಾರೆ ಎಂದು ಟ್ರೋಲ್ ಮಾಡಿದ್ದಾರೆ.

ಈ ಮೊದಲು ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೇ ಪವಿತ್ರಾ ತನ್ನ ಆಪ್ತ ಪವನ್ ಗೆ ಹೇಳಿ ಆತನನ್ನು ಸಿಕ್ಕಿ ಹಾಕಿಸಿದ್ದಳು. ಈ ವಿಚಾರ ದರ್ಶನ್ ಗೆ ಗೊತ್ತಾಗಿ ದರ್ಶನ್ ಆತನನ್ನು ಪಟ್ಟಣಗೆರೆ ಶೆಡ್ ಗೆ ಕರೆಸಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಇದೇ ವಿಚಾರಕ್ಕೆ ಈಗ ಪವಿತ್ರಾ ಗೌಡರನ್ನು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments