Webdunia - Bharat's app for daily news and videos

Install App

ನಟ ದರ್ಶನ್ ಜೈಲು ರಾಜಾತಿಥ್ಯಕ್ಕೆ ಬ್ರೇಕ್ ಹಾಕಲು ತಕ್ಕ ಪ್ಲ್ಯಾನ್ ರೆಡಿ

Krishnaveni K
ಸೋಮವಾರ, 26 ಆಗಸ್ಟ್ 2024 (12:14 IST)
ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಬಗ್ಗೆ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಈಗ ತಕ್ಕ ಪ್ಲ್ಯಾನ್ ಮಾಡಲಾಗಿದೆ.

ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಟ್ರೀಟ್ ಮೆಂಟ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೈಲಿನಲ್ಲೇ ಅವರಿಗೆ ಗುಂಡು, ತುಂಡು ಎಲ್ಲವೂ ಸರಬರಾಜು ಆಗುತ್ತಿದೆ. ಬೇಕಾದಾಗ ಸಿಗರೇಟು ಸಿಗುತ್ತಿದೆ. ಅಂತೂ ಜೈಲಲ್ಲಿ ರೆಸಾರ್ಟ್ ರೀತಿಯಲ್ಲಿ ಕಾಲ ಕಳೆಯುತ್ತಿದ್ದಾರೆ ಎಂಬ ಆರೋಪ ಬಂದಿದೆ.

ಅದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಫೋಟೋವೊಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಗೃಹಸಚಿವ ಜಿ ಪರಮೇಶ್ವರ್ ಕೆಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಈ ನಡುವೆ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗದಂತೆ ಮಾಡಲು ಈಗ ತಕ್ಕ ಪ್ಲ್ಯಾನ್ ಮಾಡಲಾಗುತ್ತಿದೆ ಎನ್ನಲಾಗಿದೆ.

ದರ್ಶನ್ ಗೆ ರಾಜಾತಿಥ್ಯ ನೀಡಲು ಸಹಾಯ ಮಾಡುತ್ತಿದ್ದುದು ರೌಡಿ  ವಿಲ್ಸನ್ ಗಾರ್ಡನ್ ನಾಗ. ಒಂದೋ ಆತನಿಗೆ ಇಲ್ಲಿ ಸಾಕಷ್ಟು ಸಹಾಯ ದೊರೆಯುತ್ತಿದ್ದು ಆ ಕಾರಣಕ್ಕೆ ಆತನನ್ನೇ ಬೇರೆ ಜೈಲಿಗೆ ಶಿಫ್ಟ್ ಮಾಡಲು ಚಿಂತನೆ ನಡೆದಿದೆ. ಇಲ್ಲದೇ ಹೋದಲ್ಲಿ ದರ್ಶನ್ ರನ್ನೇ ಬೇರೆ ಜೈಲಿಗೆ ಶಿಫ್ಟ್ ಮಾಡಬಹುದಾಗಿದೆ. ಇಂದು ಸಂಜೆಯೊಳಗೆ ಈ ಬಗ್ಗೆ ತೀರ್ಮಾನವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments