ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ ಪೊಲೀಸ್ ಆಯುಕ್ತ ದಯಾನಂದ್

Krishnaveni K
ಶನಿವಾರ, 17 ಆಗಸ್ಟ್ 2024 (09:19 IST)
ಬೆಂಗಳೂರು: ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು ಎಲ್ಲರೂ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೊಳಗಾಗಿ ಎರಡು ತಿಂಗಳಾಗುತ್ತಾ ಬಂದಿದೆ. ಇನ್ನೂ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.

ಅದಕ್ಕೆ ಕಾರಣ ಪೊಲೀಸರು ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ  ಮಾಡದೇ ಇರುವುದು. ಪೊಲೀಸರು ಈಗಾಗಲೇ ಶೇ.70 ರಷ್ಟು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಉಳಿದ 30 ಶೇಕಡಾ ಎಫ್ ಎಸ್ಎಲ್ ವರದಿ ಹೈದರಾಬಾದ್ ನಿಂದ ಬರಬೇಕಿದೆ. ಇದಾದ ಬಳಿಕ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದೇವೆ ಎಂದು ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

ದರ್ಶನ್ ಮತ್ತು ಗ್ಯಾಂಗ್ ನ ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ಎಫ್ಎಸ್ಎಲ್ ವರದಿಗಾಗಿ ಹೈದರಾಬಾದ್ ಗೆ ಕಳುಹಿಸಿಕೊಟ್ಟಿದ್ದರು. ಇದೀಗ  ಈ ವರದಿ ಇನ್ನಷ್ಟೇ ಬರಬೇಕಿದೆ. ಡಿಜಿಟಲ್ ಸಾಕ್ಷ್ಯ ಪ್ರಕರಣದಲ್ಲಿ ಮಹತ್ವದ್ದಾಗಿದೆ. ಹೀಗಾಗಿ ಇದು ಬಂದ ಬಳಿಕವಷ್ಟೇ ತನಿಖೆಯ ವರದಿಯನ್ನು ಸಲ್ಲಿಸಲಿದ್ದೇವೆ ಎಂದು ದಯಾನಂದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments