ಮೂರು ಲಕ್ಷ ಹಣ ಕಳುವಾಯ್ತು ಎಂದು ದೂರು ಕೊಟ್ಟ ವಿಜಯಲಕ್ಷ್ಮಿಗೆ ಶಾಕ್ ನೀಡಿದ ಪೊಲೀಸರು

Krishnaveni K
ಶುಕ್ರವಾರ, 26 ಸೆಪ್ಟಂಬರ್ 2025 (11:34 IST)
ಬೆಂಗಳೂರು: ಮೂರು ಲಕ್ಷ ರೂ ಹಣ ಕಳುವಾಗಿದೆ ಎಂದು ದೂರು ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಪೊಲೀಸರ ಮರುಪ್ರಶ್ನೆಯೇ ಮುಳುವಾಗುವ ಹಾಗಿದೆ.

ತಮ್ಮ ಮನೆಯಿಂದ ಇತ್ತೀಚೆಗೆ 3 ಲಕ್ಷ ರೂ. ಹಣ ಕಳುವಾಗಿದೆ ಎಂದು ವಿಜಯಲಕ್ಷ್ಮಿ ಪರವಾಗಿ ಅವರ ಮ್ಯಾನೇಜರ್ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದುವರೆಗೆ ಹಲವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆದರೆ ಹಣ ಯಾರು ಕಳವು ಮಾಡಿರಬಹುದು ಎಂಬುದರ ಬಗ್ಗೆ ಇದುವರೆಗೆ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ.

ಇದೀಗ ಪೊಲೀಸರಿಗೆ ನಿಜವಾಗಿಯೂ ಹಣ ಕಳುವಾಗಿದೆಯೇ ಎಂಬ ಬಗ್ಗೆಯೇ ಅನುಮಾನ ಮೂಡಿದೆ. ಹೀಗಾಗಿ ಈಗ ಹಣದ ಮೂಲ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಅಷ್ಟು ಹಣ ಎಲ್ಲಿಂದ ಬಂತು? ಮನೆಯಲ್ಲಿ ಯಾಕೆ ಇಟ್ಟಿದ್ದಿರಿ ಎಂಬ ಬಗ್ಗೆ ವಿವರಣೆ ನೀಡುವಂತೆ ಕೋರಿದ್ದಾರೆ.

ಹಣ ಕಳುವಾಗಿದೆ ಎಂದು ದೂರು ನೀಡಿದ್ದ ವಿಜಯಲಕ್ಷ್ಮಿ ಈಗ ಹಣದ ಮೂಲ ಯಾವುದು ಎಂದು ಹೇಳುವ ಪರಿಸ್ಥಿತಿ ಎದುರಾಗಿದೆ. ಇದೀಗ ದೂರು ಕೊಡಲು ಹೋಗಿ ಇನ್ನೊಂದು ಸಮಸ್ಯೆಯನ್ನು ಮೈಮೇಲೆಳೆದುಕೊಂಡರೇ ಎಂಬ ಸಂಶಯ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಮುಂದಿನ ಸುದ್ದಿ
Show comments