Webdunia - Bharat's app for daily news and videos

Install App

Darshan ಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಸಿದ್ಧತೆ: ಪೊಲೀಸರ ಲೆಕ್ಕಾಚಾರವೇ ಬೇರೆ

Krishnaveni K
ಗುರುವಾರ, 5 ಡಿಸೆಂಬರ್ 2024 (10:09 IST)
ನವದೆಹಲಿ: ಚಿಕಿತ್ಸೆ ನೆಪದಲ್ಲಿ ಮತ್ತಷ್ಟು ದಿನ ಮಧ್ಯಂತರ ಜಾಮೀನು ವಿಸ್ತರಿಸಲು ಕೋರ್ಟ್ ಗೆ ಮನವಿ ಸಲ್ಲಿಸಲು ದರ್ಶನ್ ಪರ ವಕೀಲರು ಸಿದ್ಧತೆಯಲ್ಲಿದ್ದರೆ ಇತ್ತ ಪೊಲೀಸರ ಲೆಕ್ಕಾಚಾರವೇ ಬೇರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕಿದೆ ಎಂಬ ನೆಪ ಹೇಳಿ ಹೈಕೋರ್ಟ್ ನಿಂದ ಆರು ವಾರಗಳ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಬಿಜಿಎಸ್ ಆಸ್ಪತ್ರೆಯಲ್ಲಿರುವ ದರ್ಶನ್ ಇದುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಅವರ ಜಾಮೀನು ಅವಧಿ ಮುಗಿಯಲು ಇನ್ನೇನು 10 ದಿನ ಬಾಕಿಯಿದೆಯಷ್ಟೇ.

ಈ ನಡುವೆ ಅವರು ನಾರ್ಮಲ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅದರ ತೀರ್ಪು ಇನ್ನಷ್ಟೇ ಹೊರಬರಬೇಕಿದೆ. ಆದರೆ ಒಂದು  ವೇಳೆ ನಾರ್ಮಲ್ ಜಾಮೀನು ಸಿಗದೇ ಇದ್ದರೆ ಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ಲೆಕ್ಕಾಚಾರ ಹಾಕುತ್ತಿದ್ದಾರೆ.

ಆದರೆ ಪೊಲೀಸರ ಲೆಕ್ಕಾಚಾರವೇ ಬೇರೆಯಿದೆ. ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ಮಧ್ಯಂತರ ಜಾಮೀನು ಪಡೆದಿದ್ದರು. ಆದರೆ ಇದುವರೆಗೆ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಹೀಗಾಗಿ ಇದೇ ಕಾರಣ ನೀಡಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments