Webdunia - Bharat's app for daily news and videos

Install App

ಜೈಲಿನಲ್ಲಿ ರಾಜಾತಿಥ್ಯಕ್ಕೆ ನಟ ದರ್ಶನ್ ಗೆ ಇನ್ನು ಪೊಲೀಸರಿಂದ ಆತಿಥ್ಯ

Krishnaveni K
ಮಂಗಳವಾರ, 27 ಆಗಸ್ಟ್ 2024 (12:11 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದುಕೊಂಡ ಕಳ್ಳಾಟವಾಡಿದ್ದಕ್ಕೆ ಈಗ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇನ್ನೀಗ ದರ್ಶನ್ ಗೆ ಮತ್ತೆ ಪೊಲೀಸರ ಆತಿಥ್ಯ ಸಿಗುವ ಸಾಧ್ಯತೆಯಿದೆ.

ನಟ ದರ್ಶನ್ ಮೇಲೆ ಈಗ ವಿಐಪಿ ಟ್ರೀಟ್ ಮೆಂಟ್ ಪಡೆದ ಅರೋಪದಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. ಎಲ್ಲಾ ದೂರಿನಲ್ಲೂ ದರ್ಶನ್ ಎ1 ಆರೋಪಿಯಾಗಿದ್ದಾರೆ. ಜೈಲಿನಲ್ಲಿ ವಿಶೇಷ ಊಟೋಪಚಾರ ಪಡೆದಿರುವುದು, ವಿಡಿಯೋ ಕಾಲ್ ಮಾಡಿರುವುದು ಇತ್ಯಾದಿ ವಿಚಾರಗಳು ದರ್ಶನ್ ಗೆ ಕಂಟಕವಾಗಿದೆ.

ಇದೀಗ ಈ ಪ್ರಕರಣದ ವಿಚಾರಣೆಗೆ ಪೊಲೀಸರು ಮತ್ತೆ ದರ್ಶನ್ ರನ್ನು ಪೊಲೀಸ್ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ನಾಳೆ ದರ್ಶನ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದ್ದು, ಈ ವೇಳೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಬೇಕಾಗುತ್ತದೆ.

ಈ ವೇಳೆ ಪೊಲೀಸರು ಅವರ ವಿರುದ್ಧ ಹೊಸದಾಗಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಲು ವಶಕ್ಕೆ ಕೇಳುವ ಸಾಧ್ಯತೆಯಿದೆ. ಒಂದು ವೇಳೆ ನ್ಯಾಯಾಲಯ ಅನುಮತಿಸಿದರೆ ದರ್ಶನ್ ಮತ್ತೆ ಪೊಲೀಸ್ ವಶಕ್ಕೆ ಹೋಗಬೇಕಾಗುತ್ತದೆ. ಇಲ್ಲದೇ ಹೋದಲ್ಲಿ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments