Webdunia - Bharat's app for daily news and videos

Install App

ಪವಿತ್ರಾ ಗೌಡಗೆ ಮೇಕಪ್ ಮಾಡಲು ಅನುವು ಮಾಡಿಕೊಟ್ಟ ಮಹಿಳಾ ಎಸ್ ಐಗೆ ನೋಟಿಸ್

Krishnaveni K
ಬುಧವಾರ, 26 ಜೂನ್ 2024 (10:27 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಕಸ್ಟಡಿಯಲ್ಲಿರುವಾಗಲೂ ಮೇಕಪ್ ನ ಚಿಂತೆ. ಮನೆಗೆ ಮಹಜರಿಗೆ ಬಂದಿದ್ದಾಗ ಮೇಕಪ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಈಗ ಮಹಿಳಾ ಪೊಲೀಸ್ ಅಧಿಕಾರಿಗೆ ಸಂಕಷ್ಟ ಎದುರಾಗಿದೆ.

ಇತ್ತೀಚೆಗೆ ಪೊಲೀಸರ ತಂಡ ಪವಿತ್ರಾ ಗೌಡರನ್ನು ಕರೆದುಕೊಂಡು ಅವರ ಮನೆಗೆ ಸ್ಥಳ ಮಹಜರು ಮಾಡಲು ಬಂದಿತ್ತು. ಈ ವೇಳೆ ಮನೆಯೊಳಗೆ ಹೋಗುವಾಗ ಪವಿತ್ರಾ ತುಟಿಗೆ ಲಿಪ್ ಸ್ಟಿಕ್ ಇರಲಿಲ್ಲ. ಸಾದಾ ಸೀದಾ ಆಗಿ ಹೋಗಿದ್ದರು. ಆದರೆ ಹೊರಗೆ ಬರುವಾಗ ಅವರು ತುಟಿಗೆ ಲಿಪ್ ಸ್ಟಿಕ್ ಹಚ್ಚಿಕೊಂಡು ಮೇಕಪ್ ಮಾಡಿಕೊಂಡಿರುವುದು ಸ್ಪಷ್ಟವಾಗಿತ್ತು.

ಇದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿತ್ತು. ಅಕ್ಕಂಗೆ ಪೊಲೀಸ್ ಕಸ್ಟಡಿಯಲ್ಲೂ ಮೇಕಪ್ ಚಿಂತೆ ಎಂದು ಹಲವರು ಟ್ರೋಲ್ ಮಾಡಿದ್ದರು. ಇದು ಹಿರಿಯರ ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಪವಿತ್ರಾಗೆ ಮೇಕಪ್ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಎಸ್ ಐ ನೇತ್ರಾವತಿ ಎಂಬವರಿಗೆ ಈಗ ನೋಟಿಸ್ ನೀಡಲಾಗಿದೆ.

ಸ್ಥಳ ಮಹಜರಿಗೆ ಹೋದಾಗ ಪವಿತ್ರಾ ಜೊತೆಗಿದ್ದಿದ್ದು ಎಸ್ ಐ ನೇತ್ರಾವತಿ. ಕಸ್ಟಡಿಯಲ್ಲಿರುವಾಗ ಮೇಕಪ್ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಯಾಕೆ ಎಂದು ವಿವರಣೆ ಕೋರಿ ಈಗ ನೋಟಿಸ್ ನೀಡಲಾಗಿದೆ. ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಡಿಸಿಪಿಯವರು ವಿಜಯನಗರ ಠಾಣೆ ಎಸ್ ಐ ನೇತ್ರಾವತಿಗೆ ನೋಟಿಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments