Webdunia - Bharat's app for daily news and videos

Install App

ಬಿರಿಯಾನಿ, ಬಾಡೂಟ ಎಲ್ಲಾ ಬಂದ್, ಕಸ್ಟಡಿಯಲ್ಲಿರುವ ದರ್ಶನ್ ಗೆ ಈಗ ಜಸ್ಟ್ ಅನ್ನ ಸಾರು

Krishnaveni K
ಗುರುವಾರ, 13 ಜೂನ್ 2024 (10:27 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಮೊದಲ ದಿನ ಬಿರಿಯಾನಿ ಬಾಡೂಟ ನೀಡಿದ್ದು ಎಲ್ಲರ ಟೀಕೆಗೆ ಗುರಿಯಾಗಿತ್ತು.

ದರ್ಶನ್ ರನ್ನು ಜೂನ್ 11 ರಂದು ಮೈಸೂರಿನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಮೊದಲ ದಿನ ಪೊಲೀಸ್ ಠಾಣೆಯಲ್ಲಿ ಕಳೆದ ದರ್ಶನ್ ಮತ್ತು ಸ್ನೇಹಿತರಿಗೆ ಪೊಲೀಸರು ಹತ್ತಿರದ ಹೋಟೆಲ್ ನಿಂದ ಬಿರಿಯಾನಿ ತರಿಸಿಕೊಟ್ಟಿದ್ದರು. ಬಿರಿಯಾನಿ ಕೊಂಡೊಯ್ಯುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೇ ಸಾರ್ವಜನಿಕರಿಂದ ತೀವ್ರ ಟೀಕೆ ಎದುರಾಗಿತ್ತು.

ಆರೋಪಿಗಳು ವಿಐಪಿಗಳಾದರೆ ರಾಜಾತಿಥ್ಯ ನೀಡುತ್ತೀರಾ ಎಂದು ನೆಟ್ಟಿಗರು ಟೀಕಿಸಿದ್ದರು. ಆದರೆ ದರ್ಶನ್ ಅಂದು ಬಿರಿಯಾನಿ ಸೇವಿಸದೇ ಕೇವಲ ಮಜ್ಜಿಗೆ ಮಾತ್ರ ಸೇವಿಸಿದ್ದರು ಎಂದು ತಿಳಿದುಬಂದಿತ್ತು. ಮರುದಿನವೂ ಬೆಳಿಗ್ಗೆ ಆರೋಪಿಗಳಿಗೆ ರೈಸ್ ಬಾತ್ ಮತ್ತು ಇಡ್ಲಿ ತರಿಸಿಕೊಡಲಾಗಿತ್ತು.

ಇದೀಗ ಆರೋಪಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಟೀಕೆಗಳು ಕೇಳಿಬಂದ ಬೆನ್ನಲ್ಲೇ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ ದರ್ಶನ್ ಮತ್ತು ಗ್ಯಾಂಗ್ ಗೆ ಕೇವಲ ಅನ್ನ, ಸಾರು ನೀಡಲಾಗಿದೆ.  ಊಟದ ಬಳಿಕವೂ ತಡರಾತ್ರಿವರೆಗೆ ಅವರನ್ನು ಸತತವಾಗಿ ವಿಚಾರಣೆಗೊಳಪಡಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments